ಮಾಜಿ ಸಂಸದೆ ಹಾಗೂ ನಟಿ ರಮ್ಯಾ 
ರಾಜಕೀಯ

ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ ನಟಿ ರಮ್ಯಾ; ಸಕ್ರಿಯೆ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಜಿ ಸಂಸದೆ ಹೇಳಿದ್ದೇನು?

ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಸದ್ಯ ಸಕ್ರಿಯೆ ರಾಜಕಾರಣದಿಂದ ದೂರ ಉಳಿದಿರುವ ಮಂಡ್ಯ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಭಾಗವಹಿಸಿದ್ದರು.

ಇಂದು ಸಂಜೆ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಹಾಗೂ 12 ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನೂ ಡಿಕೆಶಿ ಪದಗ್ರಹಣ ವಿಚಾರ ಕುರಿತು ಮಾತನಾಡಿದ ನಟಿ ರಮ್ಯಾ, ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡ್ತಿರೋದು ಖುಷಿ ಆಗ್ತಿದೆ. ಬಹಳ ವರ್ಷದಿಂದ ಅವರು ಪಟ್ಟ ಕಷ್ಟಕ್ಕೆ ಫಲ ಸಿಕ್ಕಿದೆ ಎಂದರು.

ನಾನೀಗ ಬಂದಿರೋದು ಡಿಕೆ ಶಿವಕುಮಾರ್‌ ಅವರ ಫ್ಯಾಮಿಲಿಗೋಸ್ಕರ. ಇಷ್ಟು ವರ್ಷ ಕಷ್ಟಪಟ್ಟಿರುವುದರ ಫಲ ಅವರಿಗೆ ಈಗ ಸಿಕ್ಕಿದೆ. ಅದನ್ನ ನೋಡಿ ಸೆಲಬ್ರೇಟ್‌ ಮಾಡೋಕೆ ಬಂದಿದ್ದೇನೆ. ನಾನು ಮತ್ತೆ ಸಕ್ರಿಯೆ ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು. ಎಲ್ಲದಕ್ಕೂ ಸಮಯ ಬೇಕಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಜಿ ಪರಮೇಶ್ವರ ಉಪಮುಖ್ಯಮಂತ್ರಿ

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ: ಬಂಡಾಯ ಶಾಸಕ ಋತಬ್ರತ ಬ್ಯಾನರ್ಜಿ TMC ಶಾಸಕಾಂಗ ಪಕ್ಷದ ನಾಯಕನಾಗಿ ನೇಮಕ!

3ನೇ ಮದುವೆಗೆ ರೆಡಿಯಾದ ಆಮಿರ್ ಖಾನ್! ಜುಲೈ 5 ರಂದು ಬೆಂಗಳೂರಿನ ಗೆಳತಿ ಜತೆ ನಿಖಾ; ಯಾರು ಈ ಗೌರಿ ಸ್ಪ್ರಾಟ್?

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

SCROLL FOR NEXT