ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಕೆ.ಎನ್ ರಾಜಣ್ಣ, ಯಾವುದೇ ಹುದ್ದೆ ಅಥವಾ ಖಾತೆಯು ಯಾರ ವೈಯಕ್ತಿಕ ಆಸ್ತಿಯಲ್ಲ, ಬದಲಾಗುತ್ತಿರುವ ಸಂದರ್ಭಗಳಿಗೆ ಅನುಗುಣವಾಗಿ ಅವಕಾಶಗಳು ಉದ್ಭವಿಸುತ್ತವೆ. ನಾಯಕರು ಅವುಗಳನ್ನು ಉಪಯೋಗಿಸಿಕೊಂಡು, ಜನರಿಗಾಗಿ ಕೆಲಸ ಮಾಡಲು ತಮ್ಮ ಸಾಮರ್ಥ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಟ್ರಬಲ್ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? ಎಂದು ಪ್ರಶ್ನಿಸಿದರು.