ರಾಮಲಿಂಗಾ ರೆಡ್ಡಿ, ಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ: ಸಿಎಂ ಡಿ ಕೆ ಶಿವಕುಮಾರ್ ಏನೆಂದರು?-Video

ರಾಮಲಿಂಗಾ ರೆಡ್ಡಿಯವರು ಹಳ್ಳಿಯಲ್ಲಿ ಹೋಗಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ಕೊಡಿ ಎಂದು ಕೇಳುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ, ಅವರು ನನಗೆ ತುಂಬಾ ಆತ್ಮೀಯ ಸ್ನೇಹಿತರು ಎಂದರು.

ಬೆಂಗಳೂರು: ತಮಗೆ ನೀಡಲಾದ ಖಾತೆಯಿಂದ ಅಸಮಾಧಾನಗೊಂಡು ಇಂದು ಶುಕ್ರವಾರ ಸಚಿವ ಸ್ಥಾನಕ್ಕೆ ರ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ರಾಮಲಿಂಗಾರೆಡ್ಡಿ ಅವರು ನನಗೆ ತುಂಬಾ ಆತ್ಮೀಯರು. ಪಕ್ಷ ಮತ್ತು ಸರ್ಕಾರದ ಬೆಳವಣಿಗೆಯಲ್ಲಿ ಅವರ ಪಾತ್ರ ದೊಡ್ಡದಿದೆ. ಅವರಿಗೆ ಉಂಟಾಗಿರುವ ಅಸಮಾಧಾನದ ಕುರಿತು ನಾನು ಖುದ್ದಾಗಿ ಅವರ ಜೊತೆ ಕುಳಿತು ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ” ಎಂದು ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿಯವರು ಹಳ್ಳಿಯಲ್ಲಿ ಹೋಗಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ಕೊಡಿ ಎಂದು ಕೇಳುತ್ತಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ, ಅವರು ನನಗೆ ತುಂಬಾ ಆತ್ಮೀಯ ಸ್ನೇಹಿತರು ಎಂದರು.

ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರೆಡ್ಡಿ ಅವರು ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಅವರ ಮನವೊಲಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ ಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ-Video

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: 6 ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI, ಸಾಲಗಾರರಿಗೆ ಬಿಗ್ ರಿಲೀಫ್..!

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್

ವರ್ಷಗಳ ಕಾಲ ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತ ವಿರುದ್ಧ ಮತ್ತೆ ಟ್ರಂಪ್ ಕಿಡಿ

SCROLL FOR NEXT