ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ 
ರಾಜಕೀಯ

ಡಿಕೆಶಿಗೆ ಅಧಿಕಾರವೇ ಇಲ್ಲ; ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ: JDS ನಾಯಕ ಶರವಣ ಭವಿಷ್ಯ

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಖಾತೆ ಹಂಚಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಒಳಜಗಳದ ಕಾರಣದಿಂದ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದರು. ಅಲ್ಲದೆ, ಮುನಿಯಪ್ಪ ಕೂಡ ತಮ್ಮ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದನ್ನೂ ಅವರು ಉಲ್ಲೇಖಿಸಿದರು.

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಚಿವ ಖಾತೆ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗೆ ಯಾವುದೇ ಸ್ವತಂತ್ರವಿಲ್ಲ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಅಧಿಕಾರ ನೀಡಿಲ್ಲ ಎಂದು ಟೀಕಿಸಿದರು.

ಸರ್ಕಾರದ ಪ್ರತಿಯೊಂದು ಹಂತದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಪೈಪೋಟಿ ಗೋಚರಿಸುತ್ತಿದೆ .

ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಸರ್ಕಾರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್‌ನ ರಿಮೋಟ್ ಕಂಟ್ರೋಲ್‌ನಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.

ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ಸಚಿವ ಖಾತೆ ಹಂಚಿಕೆ ಕುರಿತ ಅಸಮಾಧಾನ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಇದೇ ಕಾರಣದಿಂದ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದೂ ಭವಿಷ್ಯ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP

ಜು. 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ವಾರ್ನಿಂಗ್ ಕೊಟ್ಟ ರಾಜ್ ಠಾಕ್ರೆ!

India vs Australia: ಆಸ್ಟ್ರೇಲಿಯಾ ತಂಡದಲ್ಲಿ ಭಾರತ ಮೂಲದ ಇಬ್ಬರಿಗೆ ಸ್ಥಾನ; ಟೀಂ ಇಂಡಿಯಾ ವಿರುದ್ಧವೇ ಕಣಕ್ಕೆ!