ಡಿಕೆ ಶಿವಕುಮಾರ್ 
ರಾಜಕೀಯ

'ನಿಮಗೂ ಬಾಗಿಲು ತೆರೆದಿದೆ, ಅದರ ಬಗ್ಗೆ ಯೋಚಿಸಿ': ಜೆಡಿಎಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ

2018ರಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಸ್ಥಾನದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಶಿವಕುಮಾರ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಹಾರೋಹಳ್ಳಿ: ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಭಾನುವಾರ ಜೆಡಿಎಸ್ ಕಾರ್ಯಕರ್ತರಿಗೆ ಆಫರ್ ನೀಡಿದ್ದು, 'ನಿಮಗಾಗಿ ಬಾಗಿಲು ತೆರೆದಿದೆ ಎಂಬುವುದರ ಬಗ್ಗೆ ಯೋಚಿಸಿ' ಎಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ 2018ರ ಚುನಾವಣೋತ್ತರ ಮೈತ್ರಿಯನ್ನು ಅವರು ಉಲ್ಲೇಖಿಸಿದರು.

'ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ಮಾತ್ರ ನಾಯಕನಲ್ಲ; ಡಿಕೆ ಶಿವಕುಮಾರ್ ನಿಮಗೂ ಬಾಗಿಲು ತೆರೆದಿದ್ದಾರೆ ಎಂದು ಜನತಾದಳ ಕಾರ್ಯಕರ್ತರಿಗೆ ಹೇಳುತ್ತೇನೆ. ಇದನ್ನು ಹೇಗೆ ಬಳಸಿಕೊಳ್ಳಬೇಕೆಂದು ಯೋಚಿಸಿ' ಎಂದು ಶಿವಕುಮಾರ್ ತಮ್ಮ ತವರು ಕ್ಷೇತ್ರವಾದ ಕನಕಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.

2018ರಲ್ಲಿ ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಸ್ಥಾನದಿಂದ ಗೆಲುವು ಸಾಧಿಸಲು ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಶಿವಕುಮಾರ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ನಾವು ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಿದ್ದೇವೆ; ನಾವು ಈ ಹಿಂದೆ ಕುಮಾರಸ್ವಾಮಿ ಗೆಲ್ಲಲು ಸಹಾಯ ಮಾಡಿದ್ದೇವೆ. ಆದರೆ, ನಾನು ಈಗ ಆ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಈಗ ಬದ್ಧ ಎದುರಾಳಿಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್, 2018ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಒಟ್ಟಾಗಿ ಮೈತ್ರಿ ಮಾಡಿಕೊಂಡವು. ಜೆಡಿಎಸ್‌ನ ಭದ್ರಕೋಟೆಯಾದ ರಾಮನಗರದಲ್ಲಿ 2018ರ ಉಪಚುನಾವಣೆಯಲ್ಲಿ, ಅನಿತಾ ಕುಮಾರಸ್ವಾಮಿ ಅವರನ್ನು ಬೆಂಬಲಿಸಲು ನಿರ್ಧರಿಸಿತ್ತು. 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಆ ಸ್ಥಾನವನ್ನು ಗೆದ್ದುಕೊಂಡಿತು. ಇದು ಆ ಸಮಯದಲ್ಲಿ ಮೈತ್ರಿಕೂಟದ ಒಟ್ಟು ಸಂಖ್ಯೆಯನ್ನು 115ಕ್ಕೆ ಹೆಚ್ಚಿಸಿತು. ಕಾಂಗ್ರೆಸ್ 78 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಹೊಂದಿತ್ತು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು 7 ವರ್ಷಗಳಾಗಿವೆ. ಜೆಡಿಎಸ್ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬೆಂಬಲಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!

ರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!