ಮಾಜಿ ಸಚಿವ ಜಮೀರ್ ಖಾನ್ ಬೆಂಬಲಿಗರ ಪ್ರತಿಭಟನೆ  
ರಾಜಕೀಯ

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಲಾಬಿ: ದೆಹಲಿಯಲ್ಲಿ ಬೀಡುಬಿಟ್ಟ ಜಮೀರ್; ಬೆಂಬಲಿಗರಿಂದ ತೀವ್ರ ಪ್ರತಿಭಟನೆ

ಮಾಜಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಬೆಂಬಲಿಗರು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಬೆಂಗಳೂರು: ಸಚಿವ ಖಾತೆಗಳ ಹಂಚಿಕೆ ಕುರಿತ ಆರಂಭಿಕ ಅಸಮಾಧಾನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಸಮಾಧಾನಪಡಿಸಲು ಯತ್ನಿಸುತ್ತಿರುವಾಗಲೇ, ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆಯಲು ಬಯಸುತ್ತಿರುವ ಶಾಸಕರು ಒತ್ತಡದ ತಂತ್ರಗಳನ್ನು ಬಳಸಲು ಆರಂಭಿಸಿದ್ದಾರೆ.

ಮಾಜಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಬೆಂಬಲಿಗರು ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪ್ರತಿಭಟನಾಕಾರರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದರು. ಚಿತ್ರದುರ್ಗ ಹಾಗೂ ರಾಯಚೂರು ಸೇರಿದಂತೆ ಹಲವು ಕಡೆಗಳಲ್ಲೂ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಇತ್ತೀಚಿನ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಜಮೀರ್ ಅವರ ಕೊಡುಗೆ ಇದ್ದರೂ ಪಕ್ಷದ ಹೈಕಮಾಂಡ್ ಅವರಿಗೆ ಅನ್ಯಾಯ ಮಾಡಿದೆ ಎಂದು ಅವರು ಆರೋಪಿಸಿದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಜಮೀರ್ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ ಎನ್ನಲಾಗಿದೆ. ಜೊತೆಗೆ, ಮತದಾರರು ಎಸ್‌ಡಿಪಿಐ ಅಥವಾ ಪಕ್ಷೇತರ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದು ಅವರು ಹೇಳಿರುವಂತೆ ಕೇಳಿಬಂದ ಆಡಿಯೊ ಕ್ಲಿಪ್ ವೈರಲ್ ಆಗಿತ್ತು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಪಡೆಯಲು ಜಮೀರ್ ಅವರು ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಮೂರು ಬಾರಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಆದರೆ ಈ ಪ್ರತಿಭಟನೆ ಸ್ವಯಂಪ್ರೇರಿತವಾಗಿತ್ತು ಎಂದು ಅಬ್ಬಯ್ಯ ಪ್ರಸಾದ್ ಸ್ಪಷ್ಟಪಡಿಸಿದರು.

ಮಾಜಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಣಿ ಹಾಗೂ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಕೂಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

ಇದೇ ವೇಳೆ, ಬಳ್ಳಾರಿ ಸಂಸದ ಇ ತುಕಾರಾಮ್ ಅವರು ತಮ್ಮ ಪತ್ನಿ ಹಾಗೂ ಸಂಡೂರು (ಎಸ್‌ಟಿ) ಕ್ಷೇತ್ರದ ಶಾಸಕಿ ಅನ್ನಪೂರ್ಣ ತುಕಾರಾಮ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಮಾಜಿ ಸಚಿವರಾದ ಶಿವರಾಜ್ ತಂಗಡಗಿ ಅಶೋಕ್ ಪಟ್ಟಣ, ಅಪ್ಪಾಜಿ ಸಿ ಎಸ್ ನಾಡಗೌಡ, ಎಸ್ ಎನ್ ನಾರಾಯಣಸ್ವಾಮಿ, ಎ ಆರ್ ಕೃಷ್ಣಮೂರ್ತಿ ಹಾಗೂ ಪಿ ಎಂ ನರೇಂದ್ರಸ್ವಾಮಿ ಸೇರಿದಂತೆ ಹಲವರು ಸಚಿವ ಸ್ಥಾನಕ್ಕಾಗಿ ಬಲವಾದ ಲಾಬಿ ನಡೆಸುತ್ತಿದ್ದಾರೆ.

ಜೂನ್ 18ರಂದು ನಡೆಯಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳು ಮತ್ತು ಏಳು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!