ಬಿ.ವೈ. ವಿಜಯೇಂದ್ರ 
ರಾಜಕೀಯ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಕಡಿತಕ್ಕೆ ಸರ್ಕಾರ ಯತ್ನ: ವಿಜಯೇಂದ್ರ ಆರೋಪ

ಚುನಾವಣೆಗೂ ಮುನ್ನ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ ಕಾಂಗ್ರೆಸ್, ಫಲಾನುಭವಿಗಳ ಅರ್ಹತೆಯನ್ನು ಸಮರ್ಪಕವಾಗಿ ಪರಿಶೀಲಿಸದೆ ಯೋಜನೆಗಳನ್ನು ಘೋಷಿಸಿತ್ತು. ಇದೀಗ ಅಧಿಕಾರಕ್ಕೆ ಬಂದ ನಂತರ ಅದೇ ಜನರನ್ನು ಅನರ್ಹರೆಂದು ಘೋಷಿಸುತ್ತಿರುವುದು ಜನರಿಗೆ ಮಾಡಿದ ಅವಮಾನವಾಗಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಆರ್ಥಿಕ ಹೊರೆ ತಗ್ಗಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೂರು ವರ್ಷಗಳ ಹಿಂದೆ ಇದೇ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಆಗ ಯಾರು ಅರ್ಹರು, ಯಾರು ಅನರ್ಹರು ಎಂಬುದನ್ನು ಪರಿಶೀಲಿಸಿರಲಿಲ್ಲವೇ?" ಎಂದು ಪ್ರಶ್ನಿಸಿದರು.

ಚುನಾವಣೆಗೂ ಮುನ್ನ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ ಕಾಂಗ್ರೆಸ್, ಫಲಾನುಭವಿಗಳ ಅರ್ಹತೆಯನ್ನು ಸಮರ್ಪಕವಾಗಿ ಪರಿಶೀಲಿಸದೆ ಯೋಜನೆಗಳನ್ನು ಘೋಷಿಸಿತ್ತು. ಇದೀಗ ಅಧಿಕಾರಕ್ಕೆ ಬಂದ ನಂತರ ಅದೇ ಜನರನ್ನು ಅನರ್ಹರೆಂದು ಘೋಷಿಸುತ್ತಿರುವುದು ಜನರಿಗೆ ಮಾಡಿದ ಅವಮಾನವಾಗಿದೆ ಎಂದು ಟೀಕಿಸಿದರು.

ಸರ್ಕಾರವನ್ನು ನಂಬಿ ಮತ ನೀಡಿದ ಜನರ ವಿಶ್ವಾಸಕ್ಕೆ ಇದು ದ್ರೋಹ ಮಾಡಿದಂತಾಗಿದೆ. ಮೊದಲು ಭರವಸೆ ನೀಡಿ, ನಂತರ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮುಂದಾಗಿರುವುದು ಕಾಂಗ್ರೆಸ್‌ನ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಧರ್ಮಸ್ಥಳ ಪ್ರಕರಣವನ್ನೂ ರಾಜಕೀಯಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಮರ್ಪಕ ಆಧಾರಗಳಿಲ್ಲದೆ "ಅರ್ಬನ್ ನಕ್ಸಲರ" ಆರೋಪಗಳ ಆಧಾರದ ಮೇಲೆ ವಿಶೇಷ ತನಿಖಾ ತಂಡ (SIT) ರಚಿಸಿತ್ತು.

"ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ. ಇಂತಹ ಸೂಕ್ಷ್ಮ ವಿಷಯದಲ್ಲಿ SIT ತನಿಖೆಗೆ ಆದೇಶಿಸುವ ಮೊದಲು ಸಿದ್ದರಾಮಯ್ಯ ಅವರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿತ್ತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ