ಎಚ್.ಸಿ ಬಾಲಕೃಷ್ಣ ಮತ್ತು ಎಚ್.ಡಿ ಕುಮಮಾರಸ್ವಾಮಿ 
ರಾಜಕೀಯ

HDK ಹೊಳೇನರಸಿಪುರದಲ್ಲಿ ಆಲೂಗಡ್ಡೆ ಬೆಳೆದಿದ್ರಾ? ನಮ್ಮ ಗುರುಗಳು ಅಜ್ಜಯ್ಯ ಹತ್ರ ಪ್ರಮಾಣ ಮಾಡ್ತೀವಿ ನೀವು ಮಾಡ್ತೀರಾ..?

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡಲು 2018 ರಲ್ಲಿ ಅವರು ಒಪ್ಪಿದ್ದ ಬಗ್ಗೆ ಪ್ರಮಾಣ ಮಾಡಲಿ. ನಾವು ಅಜ್ಜಯ್ಯನ ಭಕ್ತರು, ನಾವು ಅಜ್ಜಯ್ಯ ಅವರ ಮೇಲೆ ಪ್ರಮಾಣ ಮಾಡುತ್ತೇವೆ, ಅವರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ.

ಬೆಂಗಳೂರು: ‘ಬಿಡದಿ ಟೌನ್‌ಶಿಪ್ ಯೋಜನೆಯನ್ನು ನಾನು ರೈತರ ಪರವಾಗಿ ಕೈಬಿಡಲು ಒಪ್ಪಿದ್ದೆ ಎಂದು ಕುಮಾರಸ್ವಾಮಿಯವರು ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಲಿ’ ಎಂದು ಕಾಂಗ್ರೆಸ್ ಶಾಸಕ ಎಚ್‌.ಸಿ.ಬಾಲಕೃಷ್ಣ ಸವಾಲು ಹಾಕಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡಲು 2018 ರಲ್ಲಿ ಅವರು ಒಪ್ಪಿದ್ದ ಬಗ್ಗೆ ಪ್ರಮಾಣ ಮಾಡಲಿ. ನಾವು ಅಜ್ಜಯ್ಯನ ಭಕ್ತರು, ನಾವು ಅಜ್ಜಯ್ಯ ಅವರ ಮೇಲೆ ಪ್ರಮಾಣ ಮಾಡುತ್ತೇವೆ, ಅವರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.

‘ಕೇಂದ್ರ ಸಚಿವರಾದ ಮೇಲೆ ಅವರು ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಸಮಸ್ಯೆ ಹುಟ್ಟು ಹಾಕಿದವರೇ ಹೋರಾಟ ಮಾಡುತ್ತಿದ್ದಾರೆ. ಈ ರೀತಿ ಗೋಸುಂಬೆ ರಾಜಕಾರಣ ಮಾಡುವುದು ಬಿಟ್ಟು, ಒಂದು ನಿಲುವು ತೆಗೆದುಕೊಳ್ಳಬೇಕು’ ಎಂದರು.

‘ಕುಮಾರಸ್ವಾಮಿ ತಮ್ಮ ವಿಡಿಯೊ ಸಂದೇಶದಲ್ಲಿ ಅಭಿವೃದ್ಧಿ ಹೊಂದಿದ ಟೌನ್‌ಶಿಪ್‌ನಲ್ಲಿ ರೈತರಿಗೆ ಶೇ 40ರಷ್ಟನ್ನು ಕೊಡಬೇಕೆಂದು ತೀರ್ಮಾನ ಮಾಡಿದ್ದೆ ಅಂದಿದ್ದಾರೆ. ನಾವು ಜನವಾಸದ ಪ್ರದೇಶದಲ್ಲೇ ಶೇ 50 ರಷ್ಟು, ವಾಣಿಜ್ಯ ಪ್ರದೇಶದಲ್ಲಿ ಶೇ 45 ಪಾಲು ಕೊಡುತ್ತೇವೆ’ ಎಂದು ಬಾಲಕೃಷ್ಣ ತಿಳಿಸಿದರು. ಇದೇ ವೇಳೆ ಅವರು ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ವಿಡಿಯೊ ಸಂದೇಶದ ಹೇಳಿಕೆ ಬಿಡುಗಡೆ ಮಾಡಿದರು.

ಕುಮಾರಸ್ವಾಮಿ ಅಷ್ಟೊಂದು ಆಸ್ತಿ ಹೇಗೆ ಸಂಪಾದನೆ ಮಾಡಿದರು? ಹೊಳೆನರಸೀಪುರದಲ್ಲಿ ಆಲೂಗಡ್ಡೆ ಬೆಳೆದು ಸಂಪಾದನೆ ಮಾಡಿದ್ರಾ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಣ್ಣ ಬಾಲಕೃಷ್ಣ ಹೆಸರಲ್ಲಿ ಕೋಟ್ಯಂತರ ರುಪಾಯಿ ಆಸ್ತಿ ಸಂಪಾದನೆ ಮಾಡಿಕೊಂಡರು ಬಾಲಕೃಷ್ಣ ತಿಳಿಸಿದ್ದಾರೆ.

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೋಲಾಹಲ: TMC ಬಂಡಾಯ ಗುಂಪು ಕಾಕೋಲಿ ಘೋಷ್ ನೇತೃತ್ವದಲ್ಲಿ NCP ಜೊತೆ ವಿಲೀನ!

ಜ್ವಾಲಾಮುಖಿ ಕುಳಿಗೆ ಬಿದ್ದ 'ಯೆಮೆನ್‌ನ ಸ್ಪೈಡರ್-ಮ್ಯಾನ್': ದುರಂತ ಕ್ಯಾಮೆರಾದಲ್ಲಿ ಸೆರೆ! Video

Women's T20 World Cup 2026: 'ಹನುಮಾನ್‌ ಜಿ ಮಹಾನ್'.. ಪಾಕ್ ವಿರುದ್ಧ ಗೆಲುವಿನ ಬಳಿಕ ವಾಯುಪುತ್ರನ ನೆನೆದ Deepti Sharma

Women's T20 World Cup 2026: ಪ್ರೇಕ್ಷಕರ ಸಂಖ್ಯೆಯಲ್ಲೂ ಐತಿಹಾಸಿಕ ದಾಖಲೆ ಬರೆದ India vs Pakistan ಪಂದ್ಯ!

SCROLL FOR NEXT