ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ. 
ರಾಜಕೀಯ

ಬೆಂಗಳೂರು ಅಭಿವೃದ್ಧಿಯೇ ಆದ್ಯತೆಯಾಗಿದ್ದರೆ, ತಮ್ಮದೇ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಲು ಹಿಂದೇಟು ಹಾಕುತ್ತಿರುವುದು ಏಕೆ?

ಬೆಂಗಳೂರಿನ ಕೆಲವೇ ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಉಳಿಸಿಕೊಳ್ಳಲು ಕಾರಣವೇನು?

ಬೆಂಗಳೂರು: ಬೆಂಗಳೂರು ಅಭಿವೃದ್ಧಿಯೇ ಸರ್ಕಾರದ ನಿಜವಾದ ಆದ್ಯತೆಯಾಗಿದ್ದರೆ, ಮುಖ್ಯಮಂತ್ರಿಗಳು ತಮ್ಮದೇ ಸಚಿವರಿಗೆ ಸಂಪೂರ್ಣ ಅಧಿಕಾರ ನೀಡಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಸಂಪೂರ್ಣ ಅಧಿಕಾರ ನೀಡುವ ಉದ್ದೇಶವೇ ಇಲ್ಲದಿದ್ದರೆ ಸಚಿವರನ್ನು ನೇಮಿಸುವ ಅಗತ್ಯವೇನು?" ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇನ್ನೂ ಪೂರ್ಣ ಪ್ರಮಾಣದಲ್ಲಿ ಅಧಿಕಾರ ಸ್ವೀಕರಿಸದಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಸಚಿವರ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿರುವುದು ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬೆಂಗಳೂರಿನ ಕೆಲವೇ ಪ್ರಮುಖ ಸಂಸ್ಥೆಗಳ ಮೇಲಿನ ನಿಯಂತ್ರಣವನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಉಳಿಸಿಕೊಳ್ಳಲು ಕಾರಣವೇನು? ಇದು ನಿಜವಾಗಿಯೂ ಉತ್ತಮ ಆಡಳಿತಕ್ಕಾಗಿ ಆಗಿದೆಯೇ ಅಥವಾ ನಗರದ ಭೂಮಿ, ಗುತ್ತಿಗೆಗಳು, ಸಂಪನ್ಮೂಲಗಳು ಹಾಗೂ ರಾಜಕೀಯ-ಆರ್ಥಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಸಂಸ್ಥೆಗಳ ಮೇಲಿನ ಹಿಡಿತಕ್ಕಾಗಿ ಆಗಿದೆಯೇ?" ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಒಳಜಗಳದಲ್ಲಿ ತೊಡಗಿದ್ದು, ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಳೆ ಬಂದಾಗ ಉಂಟಾಗುವ ಪ್ರವಾಹ, ಗುಂಡಿಗಳ ರಸ್ತೆಗಳು ಹಾಗೂ ಹದಗೆಟ್ಟ ಮೂಲಸೌಕರ್ಯಗಳಿಂದ ನರಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

"ಮುಖ್ಯಮಂತ್ರಿಗಳು ಈ ಅಧಿಕಾರದ ಕಿತ್ತಾಟಕ್ಕೆ ಅಂತ್ಯ ಹಾಡಿ, ಬೆಂಗಳೂರಿನ ಆಡಳಿತ ಮತ್ತು ಅಭಿವೃದ್ಧಿಯತ್ತ ಗಮನ ಹರಿಸಬೇಕು" ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದೊಳಗಿನ ಅಧಿಕಾರ ಹಂಚಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಗಳ ಮೇಲಿನ ನಿಯಂತ್ರಣದ ವಿಚಾರ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದಕ್ಕೂ ವೇದಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ತಾಯಿಯ ಬಗ್ಗೆ ಯಾರಿಗೂ ಗೊತ್ತಿಲ್ಲದ ಮಾಹಿತಿ ಬಿಚ್ಚಿಟ್ಟ ಬ್ಯಾಲದ ಕೋಚ್! VIDEO

ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ yellow ಅಲರ್ಟ್, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಜಗತ್ತನ್ನು ಬೆರಗುಗೊಳಿಸಿದ ಮಾನವ ನಿರ್ಮಿತ ಅದ್ಭುತಗಳು: ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಪ್ರವಾಸಿ ತಾಣಗಳಿವು..!

1993ರಲ್ಲಿ 3 ಎಕರೆ ಇದ್ದ ಆಸ್ತಿ 2018ಕ್ಕೆ 1,400 ಕೋಟಿ ಹೇಗಾಯ್ತು?: ರೈತರಿಗೂ ಶ್ರೀಮಂತರಾಗುವ ಮಾರ್ಗ ಹೇಳಿಕೊಡಿ; ಕುಮಾರಸ್ವಾಮಿ

SCROLL FOR NEXT