ಹೆಚ್ ಡಿ ಕುಮಾರಸ್ವಾಮಿ, ಹೆಚ್ ಸಿ ಬಾಲಕೃಷ್ಣ  
ರಾಜಕೀಯ

ಕುಮಾರಸ್ವಾಮಿಗೆ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಕೊಳ್ಳೊಕೆ ಆಗ್ಲಿಲ್ಲ, ಇನ್ನೇನು ಮಾಡ್ತಾರೆ?: HC ಬಾಲಕೃಷ್ಣ ವ್ಯಂಗ್ಯ

ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಆತ್ಮಸಾಕ್ಷಿಗೆ ಮತ ಕೇಳಿದ ಮೇಲೆ ಈಗ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಬಾರದು ಎಂದರು.

ಬೆಂಗಳೂರು: ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಟುಕೊಳ್ಳೋಕೆ ಆಗಲಿಲ್ಲ ಇನ್ನೇನು ಮಾಡ್ತಾರೆ ಅವರು ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಟಾಂಗ್ ಕೊಟ್ಟಿದ್ದಾರೆ.

ನಿನ್ನೆ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಅಡ್ಡ ಮತದಾನದಿಂದ ಅಭ್ಯರ್ಥಿಗೆ ಸೋಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಆತ್ಮಸಾಕ್ಷಿಗೆ ಮತ ಕೇಳಿದ ಮೇಲೆ ಈಗ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಬಾರದು. ಕುದುರೆ ವ್ಯಾಪಾರದ ಬಗ್ಗೆ ಮಾತನಾಡಿದರೆ ಅವರ ಶಾಸಕರಿಗೆ ಅವರೇ ಅವಮಾನ ಮಾಡಿದಂತೆ ಆಗುತ್ತದೆ. ಇರುವ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಕೊಳ್ಳೊಕೆ ಆಗ್ಲಿಲ್ಲ ಇನ್ನೇನೂ ಮಾಡ್ತೀರಾ ಎಂದು ವ್ಯಂಗ್ಯವಾಡಿದರು.

ಇಲ್ಲಿ ಯಾರದ್ದು ತಪ್ಪಿಲ್ಲ. ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಮತ ಹಾಕಿದ್ದಾರೆ. ಶಾಸಕರು ಅವರ ಆತ್ಮಸಾಕ್ಷಿಗೆ ಅನ್ನಿಸಿದಂತೆ ಮತ ಹಾಕಿದ್ದಾರೆ. ಅದನ್ನು ಗೌರವಿಸಬೇಕು. ನಾವು ನಮ್ಮ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳುವ ಜವಾಬ್ದಾರಿ ಕೊಟ್ಟಿದ್ದರು. ಅದರಂತೆ ಸರಿಯಾಗಿ ಇಟ್ಟುಕೊಂಡು ಮತ ಹಾಕಿಸಿ ನಮ್ಮ ಅಭ್ಯರ್ಥಿಗಳೆಲ್ಲರನ್ನೂ ಗೆಲ್ಲಿಸಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಪಶ್ಚಿಮ ಬಂಗಾಳದಲ್ಲಿ ತೃಣಮೂಲಕ್ಕೆ ಕುಸಿದ ಮಮತಾ (ನೇರ ನೋಟ)

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ