ಹೆಚ್ ಡಿ ಕುಮಾರಸ್ವಾಮಿ, ಹೆಚ್ ಸಿ ಬಾಲಕೃಷ್ಣ  
ರಾಜಕೀಯ

ಕುಮಾರಸ್ವಾಮಿಗೆ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಕೊಳ್ಳೋಕೆ ಆಗ್ಲಿಲ್ಲ, ಇನ್ನೇನು ಮಾಡ್ತಾರೆ?: HC ಬಾಲಕೃಷ್ಣ ವ್ಯಂಗ್ಯ

ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಆತ್ಮಸಾಕ್ಷಿಗೆ ಮತ ಕೇಳಿದ ಮೇಲೆ ಈಗ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಬಾರದು ಎಂದರು.

ಬೆಂಗಳೂರು: ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಟುಕೊಳ್ಳೋಕೆ ಆಗಲಿಲ್ಲ ಇನ್ನೇನು ಮಾಡ್ತಾರೆ ಅವರು ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಟಾಂಗ್ ಕೊಟ್ಟಿದ್ದಾರೆ.

ನಿನ್ನೆ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಅಡ್ಡ ಮತದಾನದಿಂದ ಅಭ್ಯರ್ಥಿಗೆ ಸೋಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಆತ್ಮಸಾಕ್ಷಿಗೆ ಮತ ಕೇಳಿದ ಮೇಲೆ ಈಗ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಬಾರದು. ಕುದುರೆ ವ್ಯಾಪಾರದ ಬಗ್ಗೆ ಮಾತನಾಡಿದರೆ ಅವರ ಶಾಸಕರಿಗೆ ಅವರೇ ಅವಮಾನ ಮಾಡಿದಂತೆ ಆಗುತ್ತದೆ. ಇರುವ 18 ಶಾಸಕರನ್ನು ವಿಶ್ವಾಸದಲ್ಲಿ ಇಟ್ಕೊಳ್ಳೊಕೆ ಆಗ್ಲಿಲ್ಲ ಇನ್ನೇನೂ ಮಾಡ್ತೀರಾ ಎಂದು ವ್ಯಂಗ್ಯವಾಡಿದರು.

ಇಲ್ಲಿ ಯಾರದ್ದು ತಪ್ಪಿಲ್ಲ. ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಮತ ಹಾಕಿದ್ದಾರೆ. ಶಾಸಕರು ಅವರ ಆತ್ಮಸಾಕ್ಷಿಗೆ ಅನ್ನಿಸಿದಂತೆ ಮತ ಹಾಕಿದ್ದಾರೆ. ಅದನ್ನು ಗೌರವಿಸಬೇಕು. ನಾವು ನಮ್ಮ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳುವ ಜವಾಬ್ದಾರಿ ಕೊಟ್ಟಿದ್ದರು. ಅದರಂತೆ ಸರಿಯಾಗಿ ಇಟ್ಟುಕೊಂಡು ಮತ ಹಾಕಿಸಿ ನಮ್ಮ ಅಭ್ಯರ್ಥಿಗಳೆಲ್ಲರನ್ನೂ ಗೆಲ್ಲಿಸಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

Flipkart Freedom Sale: Samsung Galaxy F70 Pro ಬಿಡುಗಡೆ, ವಿಶೇಷ ಬೆಲೆಯಲ್ಲಿ ಲಭ್ಯ!

'ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು': ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆ ಶಿವಕುಮಾರ್ ಸಮಾಧಾನ!