ಡಿಕೆ ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಬಿಡದಿ ಟೌನ್​​ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!

ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್​ಶಿಪ್​ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ ಎಂದು ಪತ್ರದ ಮೂಲಕ ಉತ್ತರಿಸಿದ್ದಾರೆ.

ಬೆಂಗಳೂರು: ಬಿಡದಿ ಟೌನ್​​ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ.

ಬಹಿಂರಂಗ ಚರ್ಚೆಗೆ ಬರುವಂತೆ ಕುಮಾರಸ್ವಾಮಿ ಹಾಕಿದ ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್​ಶಿಪ್​ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ. ಪತ್ರದ ಮೂಲಕ ಉತ್ತರಿಸಿದ್ದಾರೆ.

ಈ ಸಂಬಂಧ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಡಿಕೆ ಶಿವಕುಮಾರ್ ಅವರು, ಇದೇ ಜೂ.26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌದಕ್ಕೆ ನೀವು ಮತ್ತು ನಿಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸಿ ಎಂದು ಕುಮಾರಸ್ವಾಮಿಗೆ ಹೇಳಿದ್ದಾರೆ.

ಆರಂಭದಲ್ಲಿ ಬಿಡದಿ ಟೌನ್​ಶಿಪ್ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್​ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದ ಡಿಕೆ ಶಿವಕುಮಾರ್ ಹೇಳಿದ್ದರು. ಅಲ್ಲದೆ ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಹಿಂದೆಯೇ ಚರ್ಚೆಗೆ ಕರೆದಿದ್ದೆ. ಅದರೆ ಬರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ, ಇತರ ಅನುಭವಿ ರಾಜಕಾರಣಿಗಳ ಮೂಲಕ ಚರ್ಚೆ ಮಾಡಿಸಲಿ ಎಂದು ಹೇಳಿದ್ದರು. ಆದರೆ ಇಂದು ಕುಮಾರಸ್ವಾಮಿ ಸವಾಲು ಸ್ವೀಕರಿಸಿ ಚರ್ಚೆಗೆ ಸಮಯ ನಿಗದಿಪಡಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ಕುಮಾರಸ್ವಾಮಿ ಅವರು, ನಿಮ್ಮ ಆಹ್ವಾನಕ್ಕೆ ಧನ್ಯವಾದ. ಆದರೆ ಸಾಕಷ್ಟು ರೈತರು ಮತ್ತು ಪಾಲುದಾರರು ಬಿಡದಿ ಟೌನ್​​ಶಿಪ್ ಬಗ್ಗೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಪರಿಸರ ಕಾಳಜಿಯನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜೂನ್ 26ಕ್ಕೆ ಚರ್ಚೆಗೆ ಬರಲು ಆಗುವುದಿಲ್ಲ. ಹೀಗಾಗಿ ಜೂನ್ 27ಕ್ಕೆ ಚರ್ಚೆಯನ್ನು ನಿಗದಿಪಡಿಸಿ. ಆದರೆ ಆ ಚರ್ಚೆ ವಿಧಾನಸೌಧದಲ್ಲಿ ಬೇಡ. ಆ ಸಭೆಯನ್ನು ರಾಮಗನಗರ ಜಿಲ್ಲೆಯ ಬಿಡದಿ ಅಥವಾ ಭಾದಿತ ಪ್ರದೇಶವಾದ ಬೈರಮಂಗಲದಲ್ಲೇ ನಿಗದಿಪಡಿಸಿ ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'