ಜೆಡಿಎಸ್ ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ  
ರಾಜಕೀಯ

ಕುಮಾರಸ್ವಾಮಿಯನ್ನು CM ಮಾಡುವುದೇ ನನ್ನ ಗುರಿ: JDS ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀನಿವಾಸಮೂರ್ತಿ ಮತ್ತು ಅವರ ಕುಟುಂಬದವರು ಭಾಗಿಯಾಗಿದ್ದರು. ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಜೆಡಿಎಸ್‌ ಬಾವುಟವನ್ನು ಹಿಡಿದು ಪಕ್ಷ ಸೇರಿದರು.

ಬೆಂಗಳೂರು: ಪುಲಕೇಶಿ ನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು.

ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀನಿವಾಸಮೂರ್ತಿ ಮತ್ತು ಅವರ ಕುಟುಂಬದವರು ಭಾಗಿಯಾಗಿದ್ದರು. ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಜೆಡಿಎಸ್‌ ಬಾವುಟವನ್ನು ಹಿಡಿದು ಪಕ್ಷ ಸೇರಿದರು.

ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಶ್ರೀನಿವಾಸಮೂರ್ತಿ, ‘ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ’ ಎಂದರು.2013ರಲ್ಲಿ ಜೆಡಿಎಸ್ ಟಿಕೆಟ್‌ನಿಂದ ಪುಲಕೇಶಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ವಿಧಾನಸಭೆ ಪ್ರವೇಶಿಸಿದ್ದರು. ನಂತರ 2018ರಲ್ಲಿ

ಕಾಂಗ್ರೆಸ್‌ ಟಿಕೆಟ್‌ನಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿದ್ದರು. 2020ರಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಕಾರಣ 2023ರ ಚುನಾವಣೆಯಲ್ಲಿ ಅವರಿಗೆ ಪ್ರಮುಖ ಪಕ್ಷಗಳ ಟಿಕೆಟ್ ಕೈತಪ್ಪಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!

ಪಾಕ್ ನಲ್ಲಿ ಮತ್ತೆ 'ದುರಂಧರ್' ಆಟ: ಲಷ್ಕರ್ ಕಮಾಂಡರ್ ನಿಗೂಢ ಸಾವು, ಊಟ ಮಾಡಿ ಮಸೀದಿ ಬಳಿ ಕುಸಿದು ಬಿದ್ದ Qari Saeed Abdul Aziz