ಪ್ರಿಯಾಂಕ್ ಖರ್ಗೆ 
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video

ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆಯೇ ಎಂದು ಯೋಚಿಸಲಿ ಎಂದರು.

ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಹಿರಿಯರು. ಅವರಿಗೆ ದಶಕಗಳ ರಾಜಕೀಯ ಅನುಭವ ಇದೆ. ವಯಸ್ಸೂ ಇದೆ. ಪಕ್ಷದಲ್ಲಿ ಯಾರನ್ನೇ ಆದರೂ ಶಿಸ್ತಿನ ಹಾದಿಯಲ್ಲಿ ನಡೆಸುವ ಸಂಪೂರ್ಣ ಅಧಿಕಾರ ಮತ್ತು ಅರ್ಹತೆ ಅವರಿಗಿದೆ. ಅದನ್ನು ಪ್ರಶ್ನಿಸುವ ಯೋಗ್ಯತೆ ಬಿಜೆಪಿಯವರಿಗೆ ಇಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆ ಎಂಬುದಕ್ಕೆ ಪ್ರಮಾಣ ಮಾಡಿಸಲು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ದೇವಸ್ಥಾನಕ್ಕೆ ಕರೆದೊಯ್ಯಬೇಕಾದ ಪರಿಸ್ಥಿತಿ ಬಂದಿದ್ದರೆ, ಅವರ ಆತ್ಮವಿಶ್ವಾಸದ ಮಟ್ಟವನ್ನು ಊಹಿಸಬಹುದು. ಆದರೆ ಒಂದು ಮಾತು ಹೇಳಬೇಕೆಂದರೆ, ರಾಮನ ಹೆಸರಿನಲ್ಲಿ ಲೂಟಿ ಮಾಡಿದವರು ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಸತ್ಯವನ್ನು ಹೇಳುತ್ತಾರೆಯೇ?” ಎಂದು ಪ್ರಶ್ನಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರಾಗಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಯಾರನ್ನಾದರೂ — ಅವರು ಮುಖ್ಯಮಂತ್ರಿ ಆಗಿರಲಿ, ಮಾಜಿ ಮುಖ್ಯಮಂತ್ರಿ ಆಗಿರಲಿ, ಎನ್‌ಎಸ್‌ಯುಐ ಸದಸ್ಯರಾಗಿರಲಿ ಅಥವಾ ಯುವ ಕಾರ್ಯಕರ್ತರಾಗಿರಲಿ — ತರಾಟೆಗೆ ತೆಗೆದುಕೊಳ್ಳುವ ಸಂಪೂರ್ಣ ಹಕ್ಕು ಅವರಿಗೆ ಇದೆ. ಇದರಲ್ಲಿ ಯಾವುದೇ ಬೇಧವಿಲ್ಲ. ಅವರ ಹಿರಿಯತೆ ಮತ್ತು ಸ್ಥಾನಮಾನಕ್ಕೆ ತಕ್ಕಂತೆ ಪಕ್ಷದಲ್ಲಿ ಶಿಸ್ತು ಕಾಪಾಡುವ ಅಧಿಕಾರ ಅವರಿಗೆ ಇದೆ.

ಮತ್ತು ಅದರಿಂದ ಯಾರೂ ಬೇಸರಪಡುವುದಿಲ್ಲ. ನಮ್ಮ ಪಕ್ಷದವರೇ ಈ ವಿಷಯದ ಬಗ್ಗೆ ಚಿಂತಿಸದಿರುವಾಗ, ಬಿಜೆಪಿಗೆ ಏಕೆ ಚಿಂತೆ? ಅವರು ತಮ್ಮದೇ ಪಕ್ಷದ ಬಗ್ಗೆ ಗಮನಹರಿಸಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!