ಸುಹಾಸ್ ಸುಧಾಕರ್ 
ರಾಜಕೀಯ

ಹಿರಿಯೂರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಧಾಕರ್ ಪತ್ನಿ ಹಿಂದೇಟು: ರಾಜಕೀಯ ಅಖಾಡ ಪ್ರವೇಶಕ್ಕೆ ಪುತ್ರ ಸಜ್ಜು!

ಹಿರಿಯೂರು ಮುಂಬರುವ ತಿಂಗಳುಗಳಲ್ಲಿ ಉಪಚುನಾವಣೆ ಎದುರಿಸುವ ಸಾಧ್ಯತೆ ಇದೆ. ತಂದೆ ಸಚಿವರಾಗಿದ್ದಾಗ ಅವರ ಜೊತೆ ವಿರಳವಾಗಿ ಕಾಣಿಸಿಕೊಂಡಿದ್ದರೂ, ಸುಹಾಸ್ ಈಗ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ.

ಬೆಂಗಳೂರು: ಕಳೆದ ತಿಂಗಳು ನಿಧನರಾದ ಶಾಸಕರಾಗಿದ್ದ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲು ಸಜ್ಜಾಗುತ್ತಿದ್ದಾರೆ.

ಹಿರಿಯೂರು ಮುಂಬರುವ ತಿಂಗಳುಗಳಲ್ಲಿ ಉಪಚುನಾವಣೆ ಎದುರಿಸುವ ಸಾಧ್ಯತೆ ಇದೆ.ತಂದೆ ಸಚಿವರಾಗಿದ್ದಾಗ ಅವರ ಜೊತೆ ವಿರಳವಾಗಿ ಕಾಣಿಸಿಕೊಂಡಿದ್ದರೂ, ಸುಹಾಸ್ ಈಗ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ.

ಮೃತ ಶಾಸಕರ ಕುಟುಂಬ ಸದಸ್ಯರನ್ನು ಉಪಚುನಾವಣೆಯಲ್ಲಿ ಕಣಕ್ಕಿಳಿಸುವುದು ಸಾಮಾನ್ಯ ರಾಜಕೀಯ ತಂತ್ರ ಎಂದು ಮೂಲಗಳು ತಿಳಿಸಿವೆ. ಸುಹಾಸ್ ತಮ್ಮ ತಂದೆಯ ಬೆಂಬಲಿಗರು ಮತ್ತು ಕ್ಷೇತ್ರದ ಸ್ಥಳೀಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

ಪಕ್ಷದ ನಾಯಕರು ಸುಧಾಕರ್ ಅವರ ಪತ್ನಿ ಹರ್ಷಿಣಿ ಅನುಕಂಪದ ಮತಗಳನ್ನು ಸೆಳೆಯಬಹುದೆಂದು ನಂಬಿದ್ದಾರೆ, ಆದರೆ ಹರ್ಷಿಣಿ ಸ್ಪರ್ಧಿಸಲು ಹಿಂಜರಿಯುತ್ತಿದ್ದಾರೆ ಎಂದು ವರದಿಯಾಗಿದೆ.

ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕತಾರ್ ಕಾರ್ಖಾನೆಯಲ್ಲಿ ಸ್ಫೋಟ: ಮೃತರಲ್ಲಿ 12 ಮಂದಿ ಭಾರತೀಯರು, ಘಟನೆ ವಿಧ್ವಂಸಕ ಕೃತ್ಯವಲ್ಲ ಎಂದು ಇಂಧನ ಸಚಿವಾಲಯ ಸ್ಪಷ್ಟನೆ

ಕಾವೇರಿ ನದಿ ನೀರು: ಇಂದು CWMA ನಿಂದ ವಾಸ್ತವ ಪರಿಸ್ಥಿತಿ ಪರಿಶೀಲನೆ

14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್. ಮುನಿಯಪ್ಪ ಸುಳಿವು

ವಿದ್ಯಾರ್ಥಿಗಳು NEET ಪರೀಕ್ಷೆ ತಪ್ಪಿಸಿಕೊಂಡಿದ್ದಕ್ಕೆ ಹರಿಪ್ರಸಾದ್ ವಿಷಾದ: ತಪ್ಪು ಮಾಹಿತಿ ಹರಡದಂತೆ ಬಿಜೆಪಿಗೆ ಎಚ್ಚರಿಕೆ

ತುಮಕೂರು: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ