ವರದಿ ಸಲ್ಲಿಸಿದ ಸಿಟಿ ರವಿ 
ರಾಜಕೀಯ

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ

ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.

ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ.

ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!