ಪ್ರಿಯಾಂಕ್ ಖರ್ಗೆ  
ರಾಜಕೀಯ

HD ಕುಮಾರಸ್ವಾಮಿ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ, ನೀತಿ ನಿರ್ಧಾರಗಳ ಕುರಿತು ಬೀದಿಯಲ್ಲಿ ಚರ್ಚೆ ನಡೆಸಬೇಕೇ?: ಪ್ರಿಯಾಂಕ್ ಖರ್ಗೆ; Video

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಖಾಲಿ ಕೂತಿದ್ದೇನೆ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತುಕತೆಗೆ ಯಾವಾಗ ಕರೆಯುತ್ತಾರೋ ಆಗ ಬರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು.

ಬೆಂಗಳೂರು: ಸರ್ಕಾರದ ನೀತಿ, ಯೋಜನೆಗಳನ್ನು ಬೀದಿಯಲ್ಲಿ ನಿಂತುಕೊಂಡು ಮಾತನಾಡಬಾರದು ಎಂದು ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹಾಲಿ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ತಿಳಿದಿಲ್ಲವೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಖಾಲಿ ಕೂತಿದ್ದೇನೆ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತುಕತೆಗೆ ಯಾವಾಗ ಕರೆಯುತ್ತಾರೋ ಆಗ ಬರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು.

ನಂತರ ವಿಧಾನ ಸೌಧಕ್ಕೆ ಬರಲು ಆಗುವುದಿಲ್ಲ, ನೀವೇ ರಾಮನಗರಕ್ಕೆ ಬನ್ನಿ ಎಂದರು. ಸ್ಥಳ ದಿನಾಂಕ ಕುಮಾರಸ್ವಾಮಿಯವರೇ ಬದಲಾಯಿಸಿದರು, ಇದು ಸರಿನಾ, ಬೀದಿಯಲ್ಲಿ ನಿಂತು ಚರ್ಚೆ ಮಾಡಿದರೆ ಯೋಜನೆ, ನೀತಿ ನಿರೂಪಣೆಗಳು ಸರಿಯಾಗುತ್ತವೆಯೇ ಎಂದು ಕೇಳಿದರು.

ಸಮಸ್ಯೆಗಳನ್ನು ಆಹ್ವಾನಿಸಲು ಮುಖ್ಯಮಂತ್ರಿಗಳು ಸಿದ್ಧರಾಗಿದ್ದಾರೆ. ಕುಮಾರಸ್ವಾಮಿಯವರು ರಾಜಕೀಯ ನಾಟಕ ಮಾಡುತ್ತಿದ್ದಾರೆ, ರೈತರು, ಮಹಿಳೆಯರ, ಯುವಜನತೆ ಸಮಸ್ಯೆಯಿದ್ದರೆ ಬೀದಿಯಲ್ಲಿ ನಿಂತು ಚರ್ಚೆ ಮಾಡುತ್ತಾರೆಯೇ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?