ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ (ಸಾಂದರ್ಭಿಕ ಚಿತ್ರ) 
ರಾಜಕೀಯ

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ಅಂತಹ ದೊಡ್ಡ ಹಗರಣ ನಡೆದಿದೆ. ಚಿನ್ನ ಕಾಣೆಯಾಗಿದೆ, ಬೆಳ್ಳಿ ಕಾಣೆಯಾಗಿದೆ, ಹಣ ಕಾಣೆಯಾಗಿದೆ, ಟ್ರಸ್ಟಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ಮೌನವಾಗಿದ್ದಾರೆ" ಎಂದು ಖರ್ಗೆ ಹೇಳಿದರು.

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ದೇಣಿಗೆ "ಲೂಟಿ" ಕುರಿತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅವರಿಗೆ "ದೇಶ ಮೊದಲು" ಅಲ್ಲ, "ದೇಣಿಗೆ ಮೊದಲು" ಎಂದು ಟೀಕಿಸಿದರು.

ರಾಮ ಮಂದಿರ ದೇಣಿಗೆ ಹಗರಣ ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ಮಾಡುತ್ತಿರುವ ರೀತಿಯಿಂದ ಇದು ಸ್ಪಷ್ಟವಾಗಿದೆ ಎಂದು ಖರ್ಗೆ ಆರೋಪಿಸಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, "ಒಂದು ವಿಷಯ ಬಹಳ ಸ್ಪಷ್ಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ, ದೇಶ ಮೊದಲು ಅಲ್ಲ; ಅವರಿಗೆ ದೇಣಿಗೆ ಮೊದಲು" ಎಂದರು.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ ಖರ್ಗೆ, ಅಯೋಧ್ಯೆಯ ರಾಮ ಮಂದಿರದೊಳಗೆ ರಾಮ ಲಲ್ಲಾ ಪ್ರತಿಮೆಯ ಪ್ರತಿಷ್ಠಾಪನೆ(ಪ್ರಾಣ ಪ್ರತಿಷ್ಠೆ)ಯನ್ನು ಮೋದಿ ನೆರವೇರಿಸಿದರು. ದೇವಾಲಯವನ್ನು ಉದ್ಘಾಟಿಸಿದರು. 15 ಸದಸ್ಯರನ್ನು ಒಳಗೊಂಡ ಟ್ರಸ್ಟ್ ಸಮಿತಿಯನ್ನು ರಚಿಸಿದರು. ಅವರಲ್ಲಿ 12 ಮಂದಿಯನ್ನು ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ ಎಂದು ಹೇಳಿದರು.

"ಆ ನೇಮಕಾತಿಗಳನ್ನು ಯಾರು ಮಾಡಿದರು? ಮೋದಿ. ಈಗ, ಅಂತಹ ದೊಡ್ಡ ಹಗರಣ ನಡೆದಿದೆ. ಚಿನ್ನ ಕಾಣೆಯಾಗಿದೆ, ಬೆಳ್ಳಿ ಕಾಣೆಯಾಗಿದೆ, ಹಣ ಕಾಣೆಯಾಗಿದೆ, ಟ್ರಸ್ಟಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ಮೌನವಾಗಿದ್ದಾರೆ" ಎಂದು ಖರ್ಗೆ ಹೇಳಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೊಡ್ಡ ಭಾಷಣಗಳನ್ನು ಮಾಡುತ್ತಿದ್ದಾರೆ. ಜನ, ರಾಮ ಭಕ್ತರ ನಂಬಿಕೆಯನ್ನು ಪ್ರಶ್ನಿಸಬಾರದು ಅಥವಾ ನೋಯಿಸಬಾರದು ಎಂದು ಹೇಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

"ಆದರೆ ಆ ನಂಬಿಕೆಗೆ ಯಾರು ನೋವುಂಟು ಮಾಡಿದ್ದಾರೆ? ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷವೇ? ಅದನ್ನು ಲೂಟಿ ಮಾಡಿದ ನಿಮ್ಮ(ಬಿಜೆಪಿ) ಸರ್ಕಾರ, ನಿಮಗೆ ಪಾಲು ಸಿಗುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ?" ಎಂದು ಪ್ರಶ್ನಿಸಿದರು.

ತನಿಖೆ ನಡೆಯುತ್ತಿರುವ ವಿಧಾನವನ್ನು ಪ್ರಶ್ನಿಸಿದ ಖರ್ಗೆ, ಎಫ್‌ಐಆರ್ ಸಹ ದಾಖಲಿಸದೇ ಎಸ್‌ಐಟಿಯನ್ನು ಹೇಗೆ ರಚಿಸಲಾಯಿತು ಎಂದು ಆಶ್ಚರ್ಯಪಟ್ಟರು.

SIT ಮಾಡಿ ಯಾರಿಗೆ ರಿಪೋರ್ಟ್ ಕೊಟ್ಟರು? IAS ಆಫೀಸರ್‌ಗೆ ರಿಪೋರ್ಟ್ ಕೊಟ್ಟರು. ಆ ಅಧಿಕಾರಿ ಕೂಡ ಟ್ರಸ್ಟ್‌ನಲ್ಲಿ ಇರೋನು. ಮೋದಿ ನಾನು ತಿನ್ನಲ್ಲ, ತಿನ್ನೋರಿಗೂ ಬಿಡಲ್ಲ ಅಂದ್ರು. ಈಗ ಏನ್ ಆಯ್ತು? ಬಿಜೆಪಿ ಅವರು ಈ ಹಗರಣವನ್ನು ಮುಚ್ಚಿ ಹಾಕೋಕೆ ಮುಂದಾಗಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!