ಪ್ರೀತಂ ಗೌಡ 
ರಾಜಕೀಯ

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ, ಪ್ರತಿದಿನ 'ಲಾಟರಿ' ಹೊಡೆಯಲ್ಲ- ಪ್ರೀತಂಗೌಡ

ಪ್ರೀತಂ ಗೌಡರ ಬಗ್ಗೆ ಆಳ-ಅಗಲ ಗೊತ್ತಿಲ್ಲದವರು ಮಾತನಾಡುತ್ತಾರೆ. ನನ್ನ ಶಕ್ತಿ ಏನು ಎಂಬುದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಚೆನ್ನಾಗಿ ಗೊತ್ತಿದೆ. ಕಾರ್ಯಕರ್ತರ ಅಭಿಮಾನ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದರು.

ಹಾಸನ : ಸ್ವರೂಪ್ ಅವರು ಶಾಸಕ ಆದ ತಕ್ಷಣ ಅವರಿಗೆ ಯಾರೂ ಜಿಪಿಎ ಕೊಡಲಿಲ್ಲ. ಗೆದ್ದವರಿಗೆ ಟಿಕೆಟ್ ಕೊಡಬೇಕೆಂದರೆ ಜೆಡಿಎಸ್ ಶಾಸಕರು 18 ಮಂದಿ ಇದ್ದಾರೆ. ಅವರಿಗೆ ಅಷ್ಟೇ ಬಿ.ಫಾರಂ ಸಾಕಾ? ಅವರೇ 70–80 ಸೀಟು ಕೇಳುತ್ತಿದ್ದಾರೆ. ಹಿಂದೆ ಚನ್ನಪಟ್ಟಣದಲ್ಲಿ ಏನಾಯಿತು, ಮುಂದೆ ಹಾಸನ ಕ್ಷೇತ್ರದಲ್ಲಿ ಏನಾಗುತ್ತದೆ ಎಂಬುದನ್ನು ನೋಡೋಣ ಎಂದು ಮಾಜಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಸ್ವರೂಪ್ ಬಿಸಿ ರಕ್ತದಲ್ಲಿ ಮಾತನಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಜನರ ಪರವಾಗಿ ಉತ್ತಮ ಕೆಲಸ ಮಾಡಲಿ. ಅಭಿವೃದ್ಧಿ ಕೆಲಸಗಳ ಮೂಲಕ ಜನರ ವಿಶ್ವಾಸ ಗಳಿಸಲಿ ಎಂದರು. ಮುಂದಿನ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎನ್‌ಡಿಎ ಇದೆ.

ಹಾಲಿ ಶಾಸಕರು ಜನರ ನಿರೀಕ್ಷೆ ಈಡೇರಿಸದೆ ಜನರ ಆಕ್ರೋಶಕ್ಕೆ ಗುರಿಯಾದರೆ ನಾನು ಅಭ್ಯರ್ಥಿಯಾಗುತ್ತೇನೆ. ಆದರೆ ಅವರು ಅಭ್ಯರ್ಥಿಯಾದರೆ ನಾವೆಲ್ಲ ಸೇರಿ ಅವರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮಿಬ್ಬರನ್ನು ಬಿಟ್ಟು ಪಕ್ಷ ಬೇರೆ ಯಾರಿಗಾದರೂ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಸಂಪೂರ್ಣ ಶ್ರಮಿಸುತ್ತೇವೆ ಎಂದು ಹೇಳಿದರು.

ಪ್ರೀತಂ ಗೌಡರ ಬಗ್ಗೆ ಆಳ-ಅಗಲ ಗೊತ್ತಿಲ್ಲದವರು ಮಾತನಾಡುತ್ತಾರೆ. ನನ್ನ ಶಕ್ತಿ ಏನು ಎಂಬುದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಚೆನ್ನಾಗಿ ಗೊತ್ತಿದೆ. ಕಾರ್ಯಕರ್ತರ ಅಭಿಮಾನ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದರು. ಪ್ರೀತಂ ಗೌಡ ಬೇಡ ಎಂದು ಪಕ್ಷ ಹೇಳಿದರೆ ನಾನು ರಾಜಕೀಯದಿಂದ ವಿಶ್ರಾಂತಿ ಪಡೆಯಲು ಸಿದ್ಧ. ಪಕ್ಷದ ನಿರ್ಧಾರವೇ ನನಗೆ ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು.

ಶಾಸಕ ಸ್ವರೂಪ್ ಪ್ರಕಾಶ್ ಅವರ ರಾಜಕೀಯ ಹಿನ್ನೆಲೆಯನ್ನು ಉಲ್ಲೇಖಿಸಿದ ಪ್ರೀತಂ ಗೌಡ, "ಅವರು ಹೊಸದಾಗಿ ರಾಜಕೀಯಕ್ಕೆ ಬಂದವರು. ಪ್ರತಿದಿನ ಲಾಟರಿ ಟಿಕೆಟ್ ಹೊಡೆಯುವುದಿಲ್ಲ. ಅವರ ತಂದೆ ನಾಲ್ಕು ಬಾರಿ ಶಾಸಕರಾಗಿದ್ದರು. ಅನುಕಂಪ ಮತ್ತು ಅಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಪ್ರತಿಯೊಂದು ಚುನಾವಣೆಯೂ ಒಂದೇ ರೀತಿಯಾಗಿರುವುದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!