ಎಚ್.ಡಿ ದೇವೇಗೌಡ 
ರಾಜಕೀಯ

2028ರ ವಿಧಾನಸಭಾ ಚುನಾವಣೆ: Jds ಗೆ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ; ಸೀಟು ಹಂಚಿಕೆ ಬಗ್ಗೆ ವಿಜಯಪುರ ಜಿಲ್ಲಾ BJP ನಾಯಕರಲ್ಲಿ ಅಸಮಾಧಾನದ ದಳ್ಳುರಿ!

ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಪಿಎಂ ಎಚ್‌ಡಿ ದೇವೇಗೌಡರು ನಾಗಠಾಣ, ಇಂಡಿ, ದೇವರಹಿಪ್ಪರಗಿ ಮತ್ತು ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಸಾರ್ವಜನಿಕವಾಗಿ ಅನುಮೋದಿಸಿದ ನಂತರ ಬಿಜೆಪಿ ವಲಯದಲ್ಲಿ ಆತಂಕ ಎದುರಾಗಿದೆ.

ವಿಜಯಪುರ: 2028 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್‌ನಿಂದ ಸ್ಪಷ್ಟ ಸೂಚನೆಗಳು ಬಂದಿರುವುದು ಬಿಜೆಪಿ ಜಿಲ್ಲಾ ಘಟಕದಲ್ಲಿ, ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿಸಿದೆ.

ಫೆಬ್ರವರಿ 27 ರಂದು ವಿಜಯಪುರದಲ್ಲಿ ಪಕ್ಷದ ಬೆಳ್ಳಿ ಮಹೋತ್ಸವ ಆಚರಣೆಯ ಭಾಗವಾಗಿ ನಡೆದ ಜೆಡಿಎಸ್‌ನ ಕಿತ್ತೂರು ಕರ್ನಾಟಕ ಪ್ರಾದೇಶಿಕ ಸಮಾವೇಶದ ನಂತರದ ಬೆಳವಣಿಗೆಗಳು, ವಿಜಯಪುರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ.

ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಪಿಎಂ ಎಚ್‌ಡಿ ದೇವೇಗೌಡರು ನಾಗಠಾಣ, ಇಂಡಿ, ದೇವರಹಿಪ್ಪರಗಿ ಮತ್ತು ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಸಾರ್ವಜನಿಕವಾಗಿ ಅನುಮೋದಿಸಿದ ನಂತರ ಬಿಜೆಪಿ ವಲಯದಲ್ಲಿ ಆತಂಕ ಉಂಟಾಗಿದೆ. ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದದ ಸಂದರ್ಭದಲ್ಲಿ ಈ ಕ್ಷೇತ್ರಗಳ ಮೇಲೆ ಔಪಚಾರಿಕ ಹಕ್ಕು ಸಾಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ನಾಲ್ಕರಲ್ಲಿ, ದೇವರಹಿಪ್ಪರಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್ ಪ್ರತಿನಿಧಿಸುತ್ತಿದ್ದಾರೆ, ಹೀಗಾಗಿ ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಖಚಿತ. ಆದರೆ ಉಳಿದ ಮೂರು ಕ್ಷೇತ್ರಗಳಲ್ಲಿ, ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಜಯಗೊಂಡ ನಾಯಕರನ್ನು ಅಭ್ಯರ್ಥಿಗಳೆಂದು ಬಿಂಬಿಸಲಾಗಿತ್ತು. ಹೀಗಾಗಿ ಇವರು ಬಿಜೆಪಿಯಿಂದ ಟಿಕೆಟ್ ಪಡೆಯಲು ತಳ ಮಟ್ಟದಿಂದ ಪಕ್ಷವನ್ನು ಸಂಘಟಿಸುತ್ತಿದ್ದರು.

ಬಸವನಬಾಗೇವಾಡಿಯ ಅಪ್ಪುಗೌಡ ಮನಗೂಳಿ, ನಾಗಠಾಣದ ದೇವಾನಂದ ಚವಾಣ್ ಮತ್ತು ಇಂಡಿಯ ಬಿ.ಡಿ. ಪಾಟೀಲ್ ಅವರು ಅವರಲ್ಲಿ ಸೇರಿದ್ದಾರೆ. ಗೆದ್ದ ಮತ್ತು ಸೋತ ಅಭ್ಯರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಬೆಂಬಲಿಸುವ ಮೂಲಕ, ಮುಂದಿನ ಚುನಾವಣೆಗೆ ಮುಂಚಿತವಾಗಿ ಸಂಘಟನಾತ್ಮಕ ಸಿದ್ಧತೆಯನ್ನು ಪ್ರದರ್ಶಿಸಲು ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಈ ದೃಢವಾದ ನಡೆ ಈ ಭಾಗಗಳಿಂದ ಸ್ಪರ್ಧಿಸುವ ಮಹತ್ವಾಕಾಂಕ್ಷೆಗಳನ್ನು ಬೆಳೆಸಿಕೊಂಡಿರುವ ಬಿಜೆಪಿ ನಾಯಕರಲ್ಲಿ ಎದೆಯುರಿ ಉಂಟುಮಾಡಿದೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿ ಸಾಕಾರಗೊಂಡರೆ ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲು ಒತ್ತಾಯಿಸಿದರೆ, ಅವರ ನಿರೀಕ್ಷೆಗಳು ಆಹುತಿಯಾಗಲಿವೆ. ಅವರು ವರ್ಷಗಳಿಂದ ನಿರ್ಮಿಸಲಾದ ರಾಜಕೀಯ ನೆಲೆಯನ್ನು ಕಳೆದುಕೊಳ್ಳಬಹುದು ಎಂದು ಅನೇಕ ಸ್ಥಳೀಯ ಆಕಾಂಕ್ಷಿಗಳು ಭಯಪಡುತ್ತಾರೆ ಎಂದು ಅವರಲ್ಲಿ ಒಬ್ಬರು ಹೇಳಿದರು.

ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ಜೆಡಿಎಸ್‌ನ ಹಕ್ಕು, ಆದಾಗ್ಯೂ, ಬಿಜೆಪಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು' ಕುರಿತು ಗಂಭೀರ ಚರ್ಚೆ

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ. ಆಗುತ್ತಾ 10 ಗ್ರಾಂ ಚಿನ್ನದ ರೇಟ್?

Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ

SCROLL FOR NEXT