ಡಿಸಿಎಂ ಬೆಂಬಲಿಗ ಶಾಸಕರ ಸಭೆ 
ರಾಜಕೀಯ

DCM ಕ್ಯಾಂಪ್ ಗೆ ಸಿದ್ದರಾಮಯ್ಯ ಮೂಗುದಾರ: ಸಿಎಂ ಆದೇಶದಂತೆ ಡಿಕೆಶಿ ಬೆಂಬಲಿತ ಶಾಸಕರ ಮೇಲೆ ಕಣ್ಣಿಟ್ಟ ರಾಜ್ಯ ಗುಪ್ತಚರ ಇಲಾಖೆ!

ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಹುಟ್ಟುಹಬ್ಬದ ಮುನ್ನಾದಿನದಂದು ಡಿಕೆ ಶಿವಕುಮಾರ್ ಕ್ಯಾಂಪ್ ಹೋಟೆಲ್‌ನಲ್ಲಿ ಭೋಜನಕ್ಕೆ ಒಟ್ಟುಗೂಡಿದ ನಂತರ, ಸಿದ್ದರಾಮಯ್ಯ ಅವರು ಶಾಸಕರ ಚಲನವಲನಗಳ ಬಗ್ಗೆ ಸೂಕ್ಷ್ಮ ವಿವರಗಳನ್ನು ಕೋರಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣವು ಹೆಚ್ಚಿನ ಶಾಸಕರ ಬೆಂಬಲವನ್ನು ಗಳಿಸುತ್ತಿದೆ ಮತ್ತು ಅವರ ಸಂಖ್ಯೆ ಹೆಚ್ಚುತ್ತಿದೆ ಎಂಬ ಭಾವನೆಯನ್ನು ನೀಡಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಅವರ ಮೇಲೆ ನಿಗಾ ಇಡಲು ರಾಜ್ಯದ ಗುಪ್ತಚರ ಯಂತ್ರ ಬಳಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಹುಟ್ಟುಹಬ್ಬದ ಮುನ್ನಾದಿನದಂದು ಡಿಕೆ ಶಿವಕುಮಾರ್ ಕ್ಯಾಂಪ್ ಹೋಟೆಲ್‌ನಲ್ಲಿ ಭೋಜನಕ್ಕೆ ಒಟ್ಟುಗೂಡಿದ ನಂತರ, ಸಿದ್ದರಾಮಯ್ಯ ಅವರು ಶಾಸಕರ ಚಲನವಲನಗಳ ಬಗ್ಗೆ ಸೂಕ್ಷ್ಮ ವಿವರಗಳನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗ ಸಿಎಂ ನಿಯಂತ್ರಣದಲ್ಲಿರುವ ರಾಜ್ಯ ಗುಪ್ತಚರ ಇಲಾಖೆಗೆ ದಿನನಿತ್ಯದ ಮಾಹಿತಿಗಿಂತ ಹೆಚ್ಚಿನ ಮಾಹಿತಿಯನ್ನು ಪ್ರತಿದಿನ ನೀಡುವಂತೆ ಸೂಚಿಸಲಾಗಿದೆ.

ಡಿಕೆಎಸ್ ಶಿಬಿರವು ಸುಮಾರು 40 ಶಾಸಕರು ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎಂದು ಪರೋಕ್ಷವಾಗಿ ಹೇಳಿಕೊಂಡಿತ್ತು. ಆದರೆ ಭೋಜನಕೂಟಕ್ಕೆ ಆಹ್ವಾನಿಸಿದ್ದ 69 ಶಾಸಕರಲ್ಲಿ ಕೇವಲ 32 ಮಂದಿ ಮಾತ್ರ ಹಾಜರಾಗಿದ್ದರು. ಬಜೆಟ್ ಅಧಿವೇಶನದ ನಂತರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿಯಾಗುವುದಾಗಿ ಶಾಸಕರ ತಂಡ ಸಂದೇಶ ಕಳುಹಿಸಿತ್ತು.

ಎರಡೂ ಬಣಗಳಿಂದಲೂ ದೂರವಾಗಿ ತಟಸ್ಥರಾಗಿದ್ದ ಕೆಲವು ಶಾಸಕರು ಸಿಎಂ ಬದಲಾವಣೆಯ ಪರವಾಗಿದ್ದಾರೆ, ಆದರೆ 2028 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಇಮೇಜ್‌ಗೆ ಧಕ್ಕೆ ತರದಂತೆ ಮತ್ತು ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರದ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬೇಕೆಂದು ಬಯಸಿರುವುದಾಗಿ ಕೆಲವು ಶಾಸಕರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಶಿವಕುಮಾರ್ ಮುಖ್ಯಮಂತ್ರಿಯಾದರೆ ಮುಂದೆ ಎದುರಾಗುವ ಕಾನೂನು ತೊಡಕುಗಳ ಬಗ್ಗೆ ಎಐಸಿಸಿ ಕಾನೂನು ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದೆ. ಅಕ್ರಮ ಆಸ್ತಿ ಪ್ರಕರಣ ಸೇರಿದಂತೆ ಶಿವಕುಮಾರ್ ವಿರುದ್ಧ ಬಾಕಿ ಇರುವ ಕೆಲವು ಪ್ರಕರಣಗಳನ್ನು ನಿರ್ವಹಿಸುತ್ತಿರುವ ಸುಪ್ರೀಂ ಕೋರ್ಟ್ ವಕೀಲ ಕಪಿಲ್ ಸಿಬಲ್ ಶೀಘ್ರವೇ ಎಐಸಿಸಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲುವಾಸದಿಂದ ಹೊರಬಂದಿರುವ ಶಿವಕುಮಾರ್ ಪ್ರಕರಣವನ್ನು ಬಿಜೆಪಿ ಅಸ್ತ್ರವಾಗಿರಿಸಿಕೊಳ್ಳುತ್ತದೆ ಎಂಬ ಭಯ ಕಾಂಗ್ರೆಸ್ ಗೆ ಕಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆ ಇಡಲಿದೆ. 2024 ರ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಅವರ ವಿರುದ್ಧದ 2018 ರ ಹಣ ವರ್ಗಾವಣೆ ಪ್ರಕರಣವನ್ನು ವಜಾಗೊಳಿಸಿತು, ಇದು ಶಿವಕುಮಾರ್ ಬಣದಲ್ಲಿ ನೈತಿಕತೆಯನ್ನು ಹೆಚ್ಚಿಸಿತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!