ಬಿ ವೈ ವಿಜಯೇಂದ್ರ  
ರಾಜಕೀಯ

ಖಾಲಿ ಹುದ್ದೆಗಳ ಭರ್ತಿಗೆ SC ಒಳ ಮೀಸಲಾತಿ ಪರಿಗಣಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಲು ನ್ಯಾಯಾಲಯಕ್ಕೆ ಸಂಬಂಧಿಸಿದ ತಾಂತ್ರಿಕ ಅಂಶಗಳ ನೆಪ ಹೇಳುವುದು ಸರಿಯಲ್ಲ. ಒಳ ಮೀಸಲಾತಿ ಪರಿಗಣಿಸದಿದ್ದರೆ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.

ಬೆಂಗಳೂರು: ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಸಿ ಒಳ ಮೀಸಲಾತಿಯನ್ನು ಪರಿಗಣಿಸಿಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಲು ನ್ಯಾಯಾಲಯಕ್ಕೆ ಸಂಬಂಧಿಸಿದ ತಾಂತ್ರಿಕ ಅಂಶಗಳ ನೆಪ ಹೇಳುವುದು ಸರಿಯಲ್ಲ. ಒಳ ಮೀಸಲಾತಿ ಪರಿಗಣಿಸದಿದ್ದರೆ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.

ಮೀಸಲಾತಿ ಮಿತಿ ಹೆಚ್ಚಳ ಮತ್ತು ಒಳ ಮೀಸಲಾತಿಗೆ ಕೋರ್ಟ್ ತಡೆ ನೀಡಿರುವುದರಿಂದ ಡಿಸೆಂಬರ್ 28, 2022ಕ್ಕೂ ಮೊದಲು ಜಾರಿಯಲ್ಲಿರುವ ಮೀಸಲಾತಿ ಆದೇಶದ ಆಧಾರದ ಮೇಲೆ(ಎಸ್‌ಸಿಗಳಿಗೆ ಶೇ. 15 ಮತ್ತು ಎಸ್‌ಟಿಗಳಿಗೆ ಶೇ. 3) ಖಾಲಿ ಇರುವ 56,432 ಹುದ್ದೆಗಳಿಗೆ ನೇಮಕಾತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹಿಂದಿನ ಬಿಜೆಪಿ ಸರ್ಕಾರವು ಎಸ್‌ಸಿಗಳಿಗೆ ಮೀಸಲಾತಿ ಕೋಟಾವನ್ನು ಶೇಕಡಾ 15 ರಿಂದ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇಕಡಾ 3 ರಿಂದ 7 ಕ್ಕೆ ಹೆಚ್ಚಿಸಿತ್ತು. ಇದರಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇಕಡಾ 56 ಕ್ಕೆ ಹೆಚ್ಚಿಸಲಾಗಿದೆ. ಇದು ಸುಪ್ರೀಂ ಕೋರ್ಟ್ ಆದೇಶಿಸಿದ ಶೇ. 50 ರ ಮಿತಿಯನ್ನು ಮೀರಿದೆ.

"ನೀವು 50,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿರೋ ಅಥವಾ 1 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತಿರೋ ಎಂಬುದು ನಿಮಗೆ ಬಿಟ್ಟ ವಿಚಾರ. ಆದರೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ." "ಹಿಂದಿನ ಬಿಜೆಪಿ ಸರ್ಕಾರವು ಎಲ್ಲಾ ಸಮುದಾಯಗಳಿಗೆ ನ್ಯಾಯ ಖಚಿತಪಡಿಸಿಕೊಳ್ಳಲು ಮೀಸಲಾತಿಯನ್ನು ಶೇಕಡಾ 56 ಕ್ಕೆ ಹೆಚ್ಚಿಸಿದೆ. ಅದರ ಆಧಾರದ ಮೇಲೆ, ಈ ಖಾಲಿ ಹುದ್ದೆಗಳನ್ನು ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಪರಿಗಣಿಸುವ ಮೂಲಕ ಭರ್ತಿ ಮಾಡಬೇಕು" ಎಂದು ವಿಜಯೇಂದ್ರ ಅವರು ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮುದಾಯಗಳಿಗೆ ಪದೇ ಪದೇ "ಅನ್ಯಾಯ" ಮಾಡುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷರು, "ನಿಮಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ, ನ್ಯಾಯಾಲಯಕ್ಕೆ ಸಂಬಂಧಿಸಿದ ನೆಪಗಳನ್ನು ಹೇಳಬೇಡಿ - ಉದ್ಯೋಗ ಒದಗಿಸಿ ಮತ್ತು ನ್ಯಾಯ ಒದಗಿಸಿ" ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ, Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ! Video

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

SCROLL FOR NEXT