ಬಿ ವೈ ವಿಜಯೇಂದ್ರ  
ರಾಜಕೀಯ

'ಬಿಜೆಪಿಯಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲಗಳಿರುವುದು ನಿಜ, ಅದನ್ನು ಬಗೆಹರಿಸಿಕೊಳ್ಳುತ್ತೇವೆ': ಬಿ.ವೈ ವಿಜಯೇಂದ್ರ

ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ನೇತೃತ್ವದ ಗುಂಪಿನೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ದಾವಣಗೆರೆ: ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿರುವುದನ್ನು ಒಪ್ಪಿಕೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಪಕ್ಷದಲ್ಲಿ ಕೆಲವು ಸಣ್ಣ ಸಮಸ್ಯೆಗಳು ಮತ್ತು ಗೊಂದಲಗಳು ಇರುವುದು ಸತ್ಯ. ಇದನ್ನು ಮುಂದುವರೆಯಲು ಬಿಡುವುದಿಲ್ಲ. ಶೀಘ್ರದಲ್ಲೇ ಪರಿಹರಿಸುತ್ತೇವೆ ಎಂದು ಹೇಳಿದರು.

ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ನೇತೃತ್ವದ ಗುಂಪಿನೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಜಿಲ್ಲಾ ಬಿಜೆಪಿಯಲ್ಲಿ ಕೆಲವು ಸಣ್ಣ ದೋಷಗಳಿವೆ ಎಂಬುದನ್ನು ಅವರು ಒಪ್ಪಿಕೊಂಡು, ಎಲ್ಲವನ್ನೂ ಸರಿಪಡಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಪಕ್ಷದ ನಾಯಕರೊಂದಿಗೆ ಕೂತು ಚರ್ಚೆ ನಡೆಸುತ್ತಿದ್ದೇವೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ಮತ್ತೊಂದು ಗುಂಪಿನ ಆಕಾಂಕ್ಷಿಗಳ ಅಭಿಪ್ರಾಯವನ್ನು ಜಿಎಂಐಟಿ ಅತಿಥಿ ಗೃಹದಲ್ಲಿ ನಡೆಯುವ ಸಭೆಯಲ್ಲಿ ಸಂಗ್ರಹಿಸಲಾಗುತ್ತದೆ. ಕೊನೆಯಲ್ಲಿ ಒಗ್ಗಟ್ಟಿನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದರು.

ಜಿ.ಎಂ. ಸಿದ್ದೇಶ್ವರ ಗುಂಪಿನೊಂದಿಗೆ ಸಭೆ

ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ ಪಿ ಹರೀಶ್ ನೇತೃತ್ವದ ಗುಂಪಿನ ಅಭಿಪ್ರಾಯ ಪಡೆಯಲು ಮಧ್ಯಾಹ್ನ ಸುಮಾರು 2.15ಕ್ಕೆ ನಗರದಲ್ಲಿರುವ ಜಿಎಂಐಟಿ ಅತಿಥಿ ಗೃಹದಲ್ಲಿ ಸಭೆ ಆರಂಭವಾಯಿತು.

ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಮತ್ತು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈ ಸಭೆಯಲ್ಲಿ ಭಾಗವಹಿಸಿದರು.

ಇದಕ್ಕೂ ಮುನ್ನ ಜಿ ಎಂ ಸಿದ್ದೇಶ್ವರ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಬಿಜೆಪಿ ಕಾರ್ಯಕರ್ತರು ಎಂ ಪಿ ರೇಣುಕಾಚಾರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಹೊನ್ನಾಳಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸದೆ ಸಾಧ್ಯತೆಯ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪ ಅವರ ನಡೆಗೆ ಸಂಬಂಧಿಸಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT