ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ 
ರಾಜಕೀಯ

ಪುತ್ರನಿಗೆ ಟಿಕೆಟ್ ತಪ್ಪುವ ಆತಂಕ: 'ಅವನ್ಯಾರು ಇಲ್ಲಿ ಬಂದು ಮಾತಾಡೋಕೆ'? ಅಲ್ಪಸಂಖ್ಯಾತ ಅಭ್ಯರ್ಥಿ ಬೇಕೆಂದ ಜಮೀರ್‌ ವಿರುದ್ಧ ಮಲ್ಲಿಕಾರ್ಜುನ್ ಕಿಡಿ

ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ: ಕಾಂಗ್ರೆಸ್​​ನಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ಜೋರಾಗಿರುವ ಹೊತ್ತಲ್ಲೇ, ಬಣ ಗುದ್ದಾಟ ಹಾಗೂ ಕೆಲ ನಾಯಕರ ನಡುವೆ ಅಸಮಾಧನಾ ಸ್ಫೋಟದಂತಹ ಬೆಳವಣಿಗೆಗಳು ನಡೆಯುತ್ತಿದೆ.

ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಕೊಡಿಸಲು ಜಮೀರ್ ಅಹ್ಮದ್​ ಖಾನ್ ಲಾಬಿ ನಡೆಸುತ್ತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಈ ವಿಚಾರಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬಹಿರಂಗವಾಗಿದೆ ಜಮೀರ್​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 'ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು. ಇವೆಲ್ಲ ಸರಿ ಇರಲ್ಲ. ಇಲ್ಲಿ ಬಂದು ಮಾತನಾಡೋಕೆ ಅವನಿಗೆ ಅಧಿಕಾರ ಕೊಟ್ಟವರು ಯಾರು? ಪಕ್ಷದ ಸಭೆ ಕರೆದಾಗ ನಾನು ಈ ಬಗ್ಗೆ ಮಾತನಾಡುತ್ತೇನೆ, ಈಗ ಮಾತನಾಡಲ್ಲ' ಎಂದು ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.

ಜನವರಿ 26ರಂದು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಜಮೀರ್ ಅಹ್ಮದ್, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ಹೈಕಮಾಂಡ್ ಮತ್ತು ವರಿಷ್ಠರಿಗೆ ಮನವಿ ಮಾಡುವುದಾಗಿ ಜಮೀರ್ ನೀಡಿದ್ದ ಹೇಳಿಕೆ ಈಗ ಮಲ್ಲಿಕಾರ್ಜುನ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ಇದೇ ವೇಳೆ ಸಚಿವ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಅವರಿಗೆ ಟಿಕೆಟ್ ನೀಡಬೇಕೆಂದು ಕೆಲವು ನಾಯಕರು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಈ ಬಗ್ಗೆ ನನಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಸಭೆ ಕರೆದಾಗ ನಾಯಕರು ಏನು ಹೇಳುತ್ತಾರೆ ಎಂಬುವುದನ್ನು ಕೇಳೋಣ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ' ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'