ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಜೊತೆ ಡಿ ಕೆ ಶಿವಕುಮಾರ್  
ರಾಜಕೀಯ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

ಒಬ್ಬ ಸ್ನೇಹಿತನ ಕುಟುಂಬದಲ್ಲಿ ಮದುವೆ ಇದ್ದುದರಿಂದ ನಿನ್ನೆ ದೆಹಲಿಗೆ ಬಂದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ ಎಂದರು.

ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ನಡೆದ ತಮ್ಮ ಸಭೆಗಳ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕರ್ನಾಟಕ ಭವನದಲ್ಲಿ ನಿನ್ನೆ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿಯಾಗುತ್ತೇನೆ. ನೀವು ಮಾಧ್ಯಮದವರು ದೆಹಲಿ ನಾಯಕರು ನನಗೆ ಕಾಯುವಂತೆ ಮಾಡಿದರು ಎಂದು ವರದಿ ಮಾಡುತ್ತೀರಿ. ನಿಮ್ಮ ಪ್ರಕಾರ ನಾನು ಕಾಯುತ್ತಿದ್ದಿರಬೇಕು, ನಾನು ಯಾರನ್ನು ಭೇಟಿ ಮಾಡಿದ್ದೇನೆ, ಏನು ಮಾತನಾಡಿದ್ದೇನೆ ಎಂದು ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಸ್ನೇಹಿತನ ಮದುವೆಗೆ ಬಂದೆ

ಒಬ್ಬ ಸ್ನೇಹಿತನ ಕುಟುಂಬದಲ್ಲಿ ಮದುವೆ ಇದ್ದುದರಿಂದ ನಿನ್ನೆ ದೆಹಲಿಗೆ ಬಂದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಇಂದು ಹಲವು ಕಾರ್ಯಕ್ರಮಗಳಿವೆ, ಅದರಲ್ಲೂ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮವೂ ಇದೆ ಎಂದು ಹೇಳಿದರು. ದೆಹಲಿಯಲ್ಲಿ ನಾಯಕರ ಜೊತೆಗಿನ ತಮ್ಮ ಭೇಟಿಯ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಇಂದು ಸಚಿವರು, ಶಾಸಕರಿಗೆ ಔತಣಕೂಟ

ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಬಗ್ಗೆ ಕೇಳಿದಾಗ, ನಾನು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗಾಗಿ ಔತಣಕೂಟ ಸಮಾರಂಭ ಏರ್ಪಡಿಸಿದ್ದೇನೆ. ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು ಮತ್ತು ಬ್ಲಾಕ್ ಅಧ್ಯಕ್ಷರಿಗಾಗಿ ಮತ್ತೊಂದು ದಿನ ಔತಣಕೂಟ ಆಯೋಜಿಸುತ್ತೇನೆ,” ಎಂದು ಹೇಳಿದರು.

ತಮ್ಮ ದೆಹಲಿ ಭೇಟಿಗಳು ವೈಯಕ್ತಿಕವಾಗಿದ್ದರೂ ಅದರ ಬಗ್ಗೆ ಚರ್ಚೆಗಳು ನಡೆಯುತ್ತಿರುವುದಾಗಿ ಕೇಳಿದಾಗ, ಅದರ ಬಗ್ಗೆ ಯಾವುದೇ ಚರ್ಚೆ ಅಗತ್ಯವಿಲ್ಲ. ನಾಳೆ ಡಿನ್ನರ್ ಸಭೆ ಇದೆ, ಅದರ ನಂತರದ ದಿನ ಸಿಎಲ್‌ಪಿ ಸಭೆ ಇದೆ ಎಂದು ಹೇಳಿದರು.

ಅಸ್ಸಾಂ ರಾಜ್ಯಕ್ಕೆ ಮೊದಲ ಹಂತದಲ್ಲಿ 43 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬಗ್ಗೆ, 43 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇಂದು ಸ್ಕ್ರೀನಿಂಗ್ ಸಮಿತಿ ಸಭೆ ಇದೆ, ಆದರೆ ಅದರಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

ಇರಾನ್ ಶಾಲೆ ಸ್ಫೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ!

SCROLL FOR NEXT