ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ  
ರಾಜಕೀಯ

ರಾಜಕಾರಣ ಪ್ರವೇಶಕ್ಕೆ 50 ವರ್ಷ: ಚಿತ್ರದುರ್ಗದಲ್ಲಿ BS.ಯಡಿಯೂರಪ್ಪಗೆ ಸನ್ಮಾನ; ಚುನಾವಣೆಗೆ BJP ಸಜ್ಜು, ಅಧಿಕಾರಕ್ಕೇರಲು ರಣತಂತ್ರ..!

ಚಿತ್ರದುರ್ಗದಲ್ಲಿ ಏಪ್ರಿಲ್ ಮಧ್ಯಭಾಗದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಸೇರಿಸಿ ಮಹಾಸಮಾವೇಶ ನಡೆಸುವ ಯೋಜನೆಯನ್ನು ಪಕ್ಷ ರೂಪಿಸಿದೆ.

ಚಿತ್ರದುರ್ಗ: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ತಂತ್ರಗಳನ್ನು ರೂಪಿಸುತ್ತಿದೆ. ಇದರ ಭಾಗವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಪ್ರವೇಶಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಬೃಹತ್ ಸನ್ಮಾನ ಸಮಾರಂಭವನ್ನು ಆಯೋಜಿಸುತ್ತಿದ್ದು, ಇದಕ್ಕಾಗಿ ಸಿದ್ಧತೆ ನಡೆಸುತ್ತಿದೆ.

ಚಿತ್ರದುರ್ಗದಲ್ಲಿ ಏಪ್ರಿಲ್ ಮಧ್ಯಭಾಗದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಸೇರಿಸಿ ಮಹಾಸಮಾವೇಶ ನಡೆಸುವ ಯೋಜನೆಯನ್ನು ಪಕ್ಷ ರೂಪಿಸಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾತನಾಡಿ, ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ ಈ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಮಾವೇಶದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಂಘಟನೆಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಪಕ್ಷ ರಣತಂತ್ರ ರೂಪಿಸುತ್ತಿದ್ದು, ಈ ಕಾರ್ಯಕ್ರಮ ಚುನಾವಣಾ ಅಭಿಯಾನಕ್ಕೆ ಪ್ರಮುಖ ವೇದಿಕೆಯಾಗಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಯಡಿಯೂರಪ್ಪ ಅವರು 1972ರಲ್ಲಿ ಜನಸಂಘದ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ನಂತರ 1983ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಹಲವು ಬಾರಿ ಶಾಸಕ, 2006 ರಲ್ಲಿ ಉಪ ಮುಖ್ಯಮಂತ್ರಿ ಹಾಗೂ 2007, 2008, 2018 ಮತ್ತು 2019 ರಲ್ಲಿ ಸತತ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ರಾಜಕೀಯ ಜೀವನದ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ಪಕ್ಷ ಯೋಜಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

SCROLL FOR NEXT