ವಿನಯ್ ಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?

2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು.

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಮೇಟ್ ನೀಡಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಕುರುಬ ಸಮುದಾಯದ ಜಿ ಬಿ ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲು ಒಡ್ಡಲು ಯೋಜೆಸಿದೆ

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ದೆಹಲಿಯಲ್ಲಿ ವಿನಯ್ ಕುಮಾರ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು.

ಅಕಾಡೆಮಿ ನಡೆಸುತ್ತಿರುವ ವಿನಯ್ ಶಿಕ್ಷಕರಾ ಹೆಸರು ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಸ್ಥಾನದ ಬಗ್ಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಗುಂಪುಗಾರಿಕೆ ವಿನಯ್‌ಗೆ ವರದಾನವಾಗಿದೆ ಎನ್ನಲಾಗಿದೆ.

ಮಾಜಿ ಸಚಿವ ಎಂ ಪಿ ರೇಣುಚಾರ್ಯ ಮತ್ತು ಮಾಜಿ ಎಂ ಪಿ ಜಿ ಎಂ ಸಿದ್ದೇಶ್ವರ ಬಣಗಳು ಕ್ರಮವಾಗಿ ಬಿ ಜಿ ಅಜಯ್ ಕುಮಾರ್ ಮತ್ತು ಯಶವಂತರಾವ್ ಜಾಧವ್ ಅವರ ಹೆಸರುಗಳನ್ನು ಪ್ರಸ್ತಾಪಿಸುವ ಮೂಲಕ ಟಿಕೆಟ್‌ಗಾಗಿ ಹೋರಾಡುತ್ತಿವೆ. ಆದರೆ ಹೈಕಮಾಂಡ್ ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸಿದರೆ ಎರಡೂ ಶಿಬಿರಗಳು ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟುನಿಂತ ರೈಲು; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ!

T20 WWC: 4 ಕ್ಯಾಚ್ ಕೈಚೆಲ್ಲಿ ಮತ್ತೆ ಕಳಪೆ ಫೀಲ್ಡಿಂಗ್, ಹೀನಾಯ ದಾಖಲೆ; 137 ರನ್ ಟಾರ್ಗೆಟ್ ಕೊಟ್ಟ ಬಾಂಗ್ಲಾ, Video!

ಶಿವರಾಜ್ ಸಿಂಗ್ ಚೌಹಾಣ್ ಪುತ್ರನಿಗೆ ಕ್ಷಮೆಯಾಚಿಸಿದ ರಾಹುಲ್ ಗಾಂಧಿ: ಪ್ರಕರಣ ವಜಾಗೊಳಿಸಿದ ಹೈಕೋರ್ಟ್

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!