ದಾವಣಗೆರೆ ಮತ್ತು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ  
ರಾಜಕೀಯ

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ.

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಇಂದು ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ,ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಆದರೆ ವಿತರಣೆಗೆ ಸಿಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

SCROLL FOR NEXT