ದಾವಣಗೆರೆ ಮತ್ತು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ  
ರಾಜಕೀಯ

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ.

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಇಂದು ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ