ಉಮೇಶ್ ಮೇಟಿ ಮತ್ತು ಸಮರ್ಥ್ ಮಲ್ಲಿಕಾರ್ಜುನ್  
ರಾಜಕೀಯ

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಬೆಂಗಳೂರು: ಕೊನೆಗೂ ಕಾಂಗ್ರೆಸ್ ನಲ್ಲಿ ಕರ್ನಾಟಕ ಉಪಚುನಾವಣೆಗೆ ಟಿಕೆಟ್ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಭಾನುವಾರ ಅಧಿಕೃತವಾಗಿ ಘೋಷಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಶಾಮನೂರು ಕುಟುಂಬದ ಮೂರನೇ ತಲೆಮಾರಿಗೆ ಟಿಕೆಟ್

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಧೀಮಂತ ನಾಯಕ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲಾಗಿದೆ. ಸಮರ್ಥ್ ಅವರು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರರಾಗಿದ್ದಾರೆ.

ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದ ಮುಸ್ಲಿಂ ನಾಯಕರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಅಭ್ಯರ್ಥಿ ಪರವಾಗಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಅವರ ಪರವಾಗಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಅಂತಿಮವಾಗಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಿನ್ನೆ ಬೆಂಗಳೂರಿನಲ್ಲಿ ನಡೆಸಿದ ಸಂಧಾನ ಸಭೆಯಲ್ಲಿ ಎಲ್ಲರೂ ಒಮ್ಮತಕ್ಕೆ ಬಂದು ಸಮರ್ಥ್ ಅವರನ್ನು ಕಣಕ್ಕಿಳಿಸಲು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.

ಮೇಟಿ ಪುತ್ರನಿಗೆ ಟಿಕೆಟ್

ಇನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಮೇಟಿ ಅವರ ನಿಧನದಿಂದ ಕುಟುಂಬದ ಸದಸ್ಯರ ನಡುವೆಯೇ ಟಿಕೆಟ್‌ಗೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ನ ಈ ಇಬ್ಬರೂ ಅಭ್ಯರ್ಥಿಗಳು ನಾಳೆ ಮಾರ್ಚ್ 23ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಚಿತ್ರದುರ್ಗದಲ್ಲಿ ಭೀಕರ ಆ್ಯಸಿಡ್ ದಾಳಿ: ಮಹಿಳೆ, ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ, ಆರೋಪಿಗಾಗಿ ಪೊಲೀಸರ ಶೋಧ

West Asia war: ಹಾರ್ಮುಜ್ ಜಲಸಂಧಿ 'ರೀ ಓಪನ್' ಮಾಡಲು 22 ರಾಷ್ಟ್ರಗಳು ಇರಾನ್ ಗೆ ಒತ್ತಾಯ! ಸೇನಾ ಕಾರ್ಯಾಚರಣೆ ಶೀಘ್ರ ಸ್ಥಗಿತ ಎಂದ ಅಮೆರಿಕ

SCROLL FOR NEXT