ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮುಸ್ಲಿಂರ ಆಕ್ರೋಶ ಸ್ಫೋಟಗೊಂಡಿದ್ದು, ಪ್ರತಿಭಟನೆ ನಡೆಸಿದ್ದಾರೆ.
ನಗರದ ಅಖ್ತರ್ ರಜಾ ಸರ್ಕಲ್ ನಲ್ಲಿ ಜಮಾಯಿಸಿದ್ದ ಮುಸ್ಲಿಂ ಸಮುದಾಯದ ಯುವಕರು, ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿದೆ ಎಂದು ಘೋಷಣೆ ಕೂಗಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಸಾಕಷ್ಟು ಮನವಿ ಮಾಡಿದ್ರು ನಮ್ಮ ಮನವಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಕೇವಲ ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಮುಖಂಡ ಸಾದಿಕ್ ಪೈಲ್ವಾನ್ ಸಜ್ಜಾಗಿದ್ದಾರೆ.
ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಸಮರ್ಥ ಶಾಮನೂರು ಕಾಂಗ್ರೆಸ್ ಅಭ್ಯರ್ಥಿ ಎಂದು ಪಕ್ಷ ಘೋಷಿಸಿದ ನಂತರ ಬೆಂಬಲಿಗರೊಂದಿಗೆ ಸಭೆ ನಡೆಸಿ ಈ ನಿರ್ಧಾರ ಘೋಷಿಸಿದ್ದಾರೆ.