ಇಕ್ಬಾಲ್ ಹುಸೇನ್  
ರಾಜಕೀಯ

ಡಿ.ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆಯವರಂತೆ ನಮಗೂ ಮಂತ್ರಿ ಪದವಿ ನೀಡಿ: ಶಾಸಕ ಇಕ್ಬಾಲ್ ಹುಸೇನ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು ಎಂದರು.

ರಾಮನಗರ: ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದವರಿಗೆ ಈ ಬಾರಿಯ ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ಕೊಡಿ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು. ಹಾಗಾಗಿ, ಈಗಲೂ ಮೊದಲ ಬಾರಿ ಗೆದ್ದವರನ್ನು ಸಚಿವರನ್ನಾಗಿ ಮಾಡಬೇಕೆಂದು ನಾವು ಹೈಕಮಾಂಡ್ ಒತ್ತಾಯಿಸುತ್ತೇವೆ ಎಂದರು.

ಈ ಬಗ್ಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಸೇರಿ, ಒಟ್ಟಿಗೆ ಊಟ ಮಾಡಿ, ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ನಮ್ಮ ಮನವಿಯನ್ನು ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಮೂರು-ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಮುಖ್ಯಮಂತ್ರಿಗಳಲ್ಲಿ ಸಚಿವ ಪದವಿಗೆ ಮನವಿ ಮಾಡಿದ್ದಾರೆ. ಹಾಗಾಗಿ, ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡ ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ