ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ರಾಜ್ಯದ ಉಪಚುನಾವಣೆಗಳಲ್ಲಿ BJP ಭಾರೀ ಮತಗಳ ಅಂತರದಿಂದ ಗೆಲ್ಲಲಿದೆ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

ಕಾಂಗ್ರೆಸ್‌ಗೆ ಬಹುಮತ ಇದೆ, ಆದರೆ, ಅದೇ ಅವರಿಗೆ ತೊಂದರೆ ಆಗಿದೆ. ಜನರು ಅವರ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಬದಲಾವಣೆ ತರಬೇಕೆಂದು ಬಯಸುತ್ತಿರುವ ಜನರು ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ.

ದಾವಣಗೆರೆ: ರಾಜ್ಯದ ಉಪ ಚುನಾವಣೆಗಳಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಅದೇ ಬಿಜೆಪಿ ಪರ ಮತವಾಗಿ ಪರಿವರ್ತನೆ ಆಗಲಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಬಹುಮತ ಇದೆ, ಆದರೆ, ಅದೇ ಅವರಿಗೆ ತೊಂದರೆ ಆಗಿದೆ. ಜನರು ಅವರ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಬದಲಾವಣೆ ತರಬೇಕೆಂದು ಬಯಸುತ್ತಿರುವ ಜನರು ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆಂದು ತಿಳಿಸಿದರು.

ಇದೇ ವೇಳೆ, ಮುಸ್ಲಿಂ ಸಮುದಾಯದ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್‌ನ ನಿಷ್ಠೆಯ ಬಗ್ಗೆ ಮುಸ್ಲಿಮರಲ್ಲಿ ಅನುಮಾನ ಉಂಟಾಗಿದೆ. ಅವರು ಪ್ರಧಾನಿ ಮೋದಿ ಅವರ ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಏತನ್ಮಧ್ಯೆ, ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಟಿಕೆಟ್ ಘೋಷಿಸಿದ ನಂತರ, ಭಾನುವಾರ ರಾತ್ರಿ ಕೆಲವು ಮುಸ್ಲಿಂ ಯುವಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಇದರಿಂದ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಎದ್ದು ಕಾಣುವಂತೆ ಮಾಡಿದೆ.

ಕಾಂಗ್ರೆಸ್ ಮುಸ್ಲಿಂ ನಾಯಕನಿಗೆ ಟಿಕೆಟ್ ನೀಡಲು ವಿಫಲವಾದ ನಂತರ 20 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತ್ತು ಯುವ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಅಭ್ಯರ್ಥಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅಲ್ಪಸಂಖ್ಯಾತರನ್ನು ಬಿಜೆಪಿಗೆ ಕರೆತರುವುದಾಗಿಯೂ ಅವರು ಭರವಸೆ ನೀಡಿದ್ದಾರೆ. ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ಬ್ಯಾಕ್ ಟು ಬ್ಯಾಕ್ ಸರಣಿ ಸೋಲು: ಕೋಚ್ Gautam Gambhir ರೆಕ್ಕೆಪುಕ್ಕ ಕಟ್? BCCI ಮಹತ್ವದ ರೀವ್ಯೂ ಮೀಟಿಂಗ್!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!