ಪ್ರದೀಪ್ ಈಶ್ವರ್ 
ರಾಜಕೀಯ

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ: ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದೇ ಕಾರಣಕ್ಕೆ ಓಲೈಕೆ ರಾಜಕಾರಣ ಮಾಡುತ್ತಿದ್ದೇವೆ ಎಂಬ ಟೀಕೆಗೆ ಗುರಿ ಆಗಿದ್ದೇವೆ. ಅಲ್ಪಸಂಖ್ಯಾತ ಸಮುದಾಯದ ಜನರು ಇದನ್ನು ಅರ್ಥ ಮಾಡಿಕೊಂಡು ಮತಚಲಾವಣೆ ಮಾಡಬೇಕು ಎಂದು ಕೋರಿದರು.

ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಆದರೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನನಗೆ ಪಕ್ಷ ಅವಕಾಶ ಮಾಡಿಕೊಟ್ಟಿಲ್ಲವೇ? ಕುಟುಂಬ ರಾಜಕಾರಣ ಬಿಜೆಪಿಯಲ್ಲಿ ಕೂಡ ಇದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರ ತಂದೆ‌ ದಾಸಕರಿಯಪ್ಪ ಕೂಡ ರಾಜಕಾರಣದಲ್ಲಿದ್ದವರು. ಬಿಜೆಪಿ ಕುಟುಂಬ ರಾಜಕಾರಣ ಮಾಡಿದರೆ ಸರಿಯೇ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶ ಹಾಳಾಗಿದೆ. ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ಅಮೆರಿಕದ ಮಾತು ಕೇಳಿ ನಿಲ್ಲಿಸಿದ್ದಾರೆ. ಇರಾನ್- ಅಮರಿಕ ಯುದ್ಧದಲ್ಲಿ ಭಾರತ ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದಕ್ಕೆ ಏಕೆ 56 ಇಂಚಿನ ಎದೆಯ ನಾಯಕ ಪರಿಹಾರ ನೀಡಿಲ್ಲ. 11 ವರ್ಷಗಳಿಂದ ದೇಶ ಅಭಿವೃದ್ಧಿ ಕಂಡಿಲ್ಲ. ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ನೂರಾರು ಮಂದಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಅಮೆರಿಕಾದ ವ್ಯಾಲೆರೋ ರಿಫೈನರಿಯಲ್ಲಿ ಭೀಕರ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಹೆಚ್ಚಿದ ಆತಂಕ

2028ಕ್ಕೆ ರಾಜ್ಯದಲ್ಲಿ ಹಿಂದೂ ಸರ್ಕಾರ: ಪೊಲೀಸರ ಕೈಗೆ AK-47 ಕೊಟ್ಟು, ಪಾಕಿಸ್ತಾನ್ ಜಿಂದಾಬಾದ್ ಅಂದವರ ಬಾಯಿಗೆ ಗುಂಡಿಟ್ಟು ಹೊಡೆಸ್ತೀವಿ; ಯತ್ನಾಳ್

SCROLL FOR NEXT