ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್ 
ರಾಜಕೀಯ

ದಾವಣಗೆರೆ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್; ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್!

ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಖಾನ್ ಅವರು ಇಂದು ಸಾದಿಕ್ ಪೈಲ್ವಾನ್ ಅವರನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕರೆದುಕೊಂಡು ಬಂದಿದ್ದರು.

ಸಿಎಂ ಸಿದ್ದರಾಮಯ್ಯ ಅವರು ಸಾದಿಕ್ ಪೈಲ್ವಾನ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಸ್‌ಎಸ್ ಮಲ್ಲಿಕಾರ್ಜುನ ಪುತ್ರ ಸಮರ್ಥ್ ಗೆ ಟಿಕೆಟ್ ನೀಡಿದ್ದಕ್ಕಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ಅವರು ಸಿಎಂ ಸಿದ್ದರಾಮಯ್ಯ ಮಾತಿಗೆ ಸಮ್ಮತಿ ಸೂಚಿಸಿದ್ದು, ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಟಿಕೆಟ್ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ನಾಮಪತ್ರ‌ ಸಲ್ಲಿಸಿದ್ದೆ, ನಿಮ್ಮ ಜೊತೆಗಿನ ಮಾತುಕತೆ ಸಮಾಧಾನ ತಂದಿದೆ. ಈಗಿನಿಂದಲೇ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬಾರದು, ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆಂದು ಸಾದಿಕ್ ಅವರು ಸಿಎಂಗೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

ಸಿಎಂ ಭೇಟಿ ಬಳಿಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಗೆ ಸಾದಿಕ್ ಪೈಲ್ವಾನ್ ತೆರಳಿದ್ದಾರೆ. ಈ ಮೂಲಕ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಬಂಡಾಯ ಶಮನವಾದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಇಸ್ರೇಲ್ ಕೊಲ್ಲದಂತೆ ತಡೆದಿದ್ದೇ ನಾವು: Pakistan

IPL ನ ಕನಸಲ್ಲಿ ಮಾತ್ರ ಮೀರಿಸ್ತೀವಿ.. ಒಳ್ಳೆ ಆಫರ್ ಸಿಕ್ರೆ ಆಟಗಾರರು ಹೋಗ್ದೇ ಏನ್ ಮಾಡ್ತಾರೆ..: ಪಾಕ್ ಆಟಗಾರನಿಂದ PSLನ ಭೀಕರ ಟ್ರೋಲ್!

West Bengal polls 2026: ಇಂದು ರಾಜಕೀಯ ಬದ್ಧ ವೈರಿ ಆದರೆ ಬಿಜೆಪಿ ಗೆಲುವಿನ ಖಾತೆ ತೆರೆಯಲು ಕಾರಣವೇ TMC: ಹೇಗೆ ಗೊತ್ತೇ?

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ ಅಶ್ಲೀಲ 'ನಾಗಿನ್ ಡ್ಯಾನ್ಸ್', Video Viral

SCROLL FOR NEXT