ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಜಯೇಂದ್ರ 
ರಾಜಕೀಯ

ಬಾಗಲಕೋಟೆ ಉಪಚುನಾವಣೆ: ತಮ್ಮ ಪರ ಯತ್ನಾಳ್ ಪ್ರಚಾರ ನಡೆಸಲು ಚರಂತಿಮಠ್ ಬೇಡಿಕೆ; ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಮ್ಮತವೇ?

ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಯತ್ನಾಳ್ ಪದೇ ಪದೇ ಮತ್ತು ಸಾರ್ವಜನಿಕವಾಗಿ ಟೀಕೆ ಮಾಡಿದ್ದರಿಂದ ವಿಜಯೇಂದ್ರ ಅವರಿಗೆ ಅತೃಪ್ತಿ ಉಂಟಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪರ ಪ್ರಚಾರಕ್ಕೆ ಆಹ್ವಾನಿಸಬೇಕೆಂಬ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಬೇಡಿಕೆಯಿಂದ ಪಕ್ಷದೊಳಗೆಅಸಮಾಧಾನ ಹುಟ್ಟು ಹಾಕಿದೆ.

ವಿಶೇಷವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಕ್ರೋಶಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ. ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಯತ್ನಾಳ್ ಪದೇ ಪದೇ ಮತ್ತು ಸಾರ್ವಜನಿಕವಾಗಿ ಟೀಕೆ ಮಾಡಿದ್ದರಿಂದ ವಿಜಯೇಂದ್ರ ಅವರಿಗೆ ಅತೃಪ್ತಿ ಉಂಟಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕರು ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಯತ್ನಾಳ್ ತಮ್ಮ ನಿಲುವನ್ನು ಸರಿಪಡಿಸಿಕೊಳ್ಳಲಿಲ್ಲ, ನಂತರ ಮಾರ್ಚ್ 26, 2025 ರಂದು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಹೊರಹಾಕಲಾಯಿತು. ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರವೂ ಯತ್ನಾಳ್ ನಾಯಕರ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದರು.

ಈ ಹಿನ್ನೆಲೆಯಲ್ಲಿ, ಮಾಧ್ಯಮಗಳೊಂದಿಗೆ ಮಾತನಾಡಿದ ಚರಂತಿಮಠ ಬಾಗಲಕೋಟೆಯಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಲು ಯತ್ನಾಳ್ ಅವರನ್ನು ಆಯ್ಕೆ ಮಾಡಿಕೊಂಡರೆ ಅವರನ್ನು ಸ್ವಾಗತಿಸುವುದಾಗಿ ಹೇಳಿದರು. ಯತ್ನಾಳ್ ಪ್ರಚಾರ ಮಾಡುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ. ಒಂದು ವೇಳೆ ಅವರು ಪ್ರಚಾರಕ್ಕೆಹಾಜರಾದರೇ ಪಕ್ಷದ ಹಲವಾರು ನಿಷ್ಠಾವಂತರು ಮತ್ತು ರಾಜ್ಯ ನಾಯಕತ್ವಕ್ಕೆ ಆತಂಕ ಎದುರಾಗುತ್ತದೆ ಎಂದು ಹೇಳಲಾಗಿದೆ.

ಯತ್ನಾಳ್ ಅವರ ಬಗೆಗಗಿನ ಒಲವು ಚುನಾವಣಾ ಪರಿಗಣನೆಗಳಿಂದ ಪ್ರೇರಿತವಾಗಿದೆ ಎಂದು ಬಿಜೆಪಿ ಒಳಗಿನವರು ಹೇಳುತ್ತಾರೆ. ಬಲವಾದ ಹಿಂದುತ್ವ ಪರ ನಿಲುವಿಗೆ ಹೆಸರುವಾಸಿಯಾದ ಯತ್ನಾಳ್ ಅವರನ್ನು ಕೆಲವು ಬೆಂಬಲಿಗರು ಹಿಂದೂ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡುವ ವ್ಯಕ್ತಿ ಎಂದು ನೋಡುತ್ತಾರೆ, ವಿಶೇಷವಾಗಿ ಬಾಗಲಕೋಟೆಯಂತ ನಗರ ಪ್ರದೇಶಗಳಲ್ಲಿ, ಸಾಂಪ್ರದಾಯಿಕವಾಗಿ ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ಬಿಜೆಪಿ ಹೆಚ್ಚಿನ ಬೆಂಬಲವನ್ನು ಹೊಂದಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕ್ಷೇತ್ರದ ಗ್ರಾಮೀಣ ಭಾಗಗಳು ಹೆಚ್ಚಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿವೆ, ವಿಶೇಷವಾಗಿ ದಿವಂಗತ ಶಾಸಕ ಎಚ್‌ವೈ ಮೇಟಿ ಅವರ ಪ್ರಭಾವ ಹೆಚ್ಚಿದೆ. ಕಾಂಗ್ರೆಸ್ ಈಗ ಅವರ ಪುತ್ರ ಉಮೇಶ್ ಮೇಟಿ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ, ಗ್ರಾಮೀಣ ಮತದಾರರ ಮೇಲೆ ತನ್ನ ಹಿಡಿತವನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಬೆಳವಣಿಗೆಗಳಿಗೆ ಮತ್ತೊಂದು ಆಯಾಮವನ್ನು ಸೇರಿಸುತ್ತಾ, ಯತ್ನಾಳ್ ಸ್ವತಃ ಬಿಜೆಪಿ ಅಭ್ಯರ್ಥಿಯ ಮೇಲಿನ ಗೌರವವನ್ನು ಉಲ್ಲೇಖಿಸಿ, ಚರಂತಿಮಠ್ ಪರವಾಗಿ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಪ್ರಚಾರ ಮಾಡುವುದಾಗಿ ಘೋಷಿಸಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಚರಂತಿಮಠ ಪಕ್ಷದ ಟಿಕೆಟ್ ಪಡೆದ ಕೀರ್ತಿಯನ್ನೂ ಅವರು ಹೊಂದಿದ್ದಾರೆ.

ಚರಂತಿಮಠ್ ಅವರ ಚುನಾವಣಾ ಲಾಭಕ್ಕಾಗಿ ಯತ್ನಾಳ್ ಅವರ ಪ್ರಭಾವವನ್ನು ಬಳಸಿಕೊಳ್ಳುವುದು. ಪಕ್ಷದ ರಾಜ್ಯ ನಾಯಕತ್ವದೊಂದಿಗಿನ ಘರ್ಷಣೆಯನ್ನು ತಪ್ಪಿಸುವುದರ ನಡುವೆ ಸಮತೋಲನ ಸಾಧಿಸುವ ಮಾರ್ಗವಾಗಿ ಕಾಣುತ್ತಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್: ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ, ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ!

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು : ಶ್ರೀರಾಮುಲು

ಜಮೀರ್- ಮಲ್ಲಿಕಾರ್ಜುನ್ ಜಟಾಪಟಿ: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪ; ಶಾಮನೂರು ಕುಟುಂಬದ ವಿರುದ್ಧ ಮುಸ್ಲಿಮರ ಕೋಪ!

ನೂರಾರು ಕೋಟಿಗಳ ಒಡೆಯ TVK Vijay ತಂದೆ-ತಾಯಿ, ಮಕ್ಕಳಿಗೂ ಸಾಲ ಕೊಟ್ಟಿದ್ದಾರಾ? ಅಫಿಡವಿಟ್ಟಿನಲ್ಲಿ ನಮೂದು

ಭಾರತದಲ್ಲಿ ಪುರುಷರಿಗಿಂತ ಹೆಚ್ಚಿನ ಮಹಿಳೆಯರಿಗೆ ಹೊಟ್ಟೆಯ ಬೊಜ್ಜಿನ ಸಮಸ್ಯೆ: ಅಧ್ಯಯನ ವರದಿ

SCROLL FOR NEXT