ಸಿದ್ದರಾಮಯ್ಯ, ಶ್ರೀರಾಮುಲು 
ರಾಜಕೀಯ

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು : ಶ್ರೀರಾಮುಲು

ಐದು ದಿನ ಬಿಡಿ, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಇಲ್ಲಿಯೇ ಇದ್ದರು. ಎಂಎಲ್ಎ ಆಗಿ ನಮ್ಮ ಭಾಗದಲ್ಲಿ ಗೆದ್ದಿದ್ದರು. ನನ್ನ ವಿರುದ್ಧವೇ 1600 ವೋಟ್ ಗಳಿಂದ ಗೆದ್ದಿದ್ದರು. ಆ 1600 ವೋಟ್ ಗಳು ಕಳ್ಳ ವೋಟ್ ಗಳಾಗಿದ್ದವು.

ಬಾಗಲಕೋಟೆ: ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು ಎಂದು ಶ್ರೀರಾಮುಲು ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಐದು ದಿನ ಬಿಡಿ, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಇಲ್ಲಿಯೇ ಇದ್ದರು. ಎಂಎಲ್ಎ ಆಗಿ ನಮ್ಮ ಭಾಗದಲ್ಲಿ ಗೆದ್ದಿದ್ದರು. ನನ್ನ ವಿರುದ್ಧವೇ 1600 ವೋಟ್ ಗಳಿಂದ ಗೆದ್ದಿದ್ದರು. ಆ 1600 ವೋಟ್ ಗಳು ಕಳ್ಳ ವೋಟ್ ಗಳಾಗಿದ್ದವು.

ಯಾಕಂದ್ರೆ ಸಿ.ಎಂ.ಇಬ್ರಾಹಿಂ, ಪಾಟೀಲ್ ಸಾಹೇಬ್ರುಗಳು ಉಸ್ತುವಾರಿಯಾಗಿದ್ದರು. ಅವರು ಏನು ಹೇಳಿದ್ದರು ನೆನಪಿಸಿಕೊಳ್ಳಿ. ಹತ್ತಿರತ್ತಿರ 2 ಸಾವಿರ ವೋಟ್ ಗಳನ್ನು ಖರೀದಿ ಮಾಡಿ, ಗೆದ್ದಿದ್ದೀವಿ ಅಂದಿದ್ದರು. ಬಹುಶಃ ಅಂದು ಸಿದ್ದರಾಮಯ್ಯ ಸಾಹೇಬರ ಗೆಲುವು ಅಂತಾನೇ ಅರ್ಥ ಎಂದಿದ್ದಾರೆ.

ಈ ಸಲ ನಾವೂ ಬಿಜೆಪಿಯಲ್ಲಿ ಚರಂತಿಮಠ ಅವರನ್ನು ಗೆಲ್ಲಿಸಬೇಕು ಎಂಬ ವಿಚಾರದಲ್ಲಿ ಎಲ್ಲರೂ ಎಫರ್ಟ್ ಹಾಕ್ತಾ ಇದ್ದೇವೆ. ಚರಂತಿಮಠ್ ಅವರು ಕೂಡ ಬಹಳಷ್ಟು ಒಳ್ಳೊಳ್ಳೆ ಕೆಲಸಗಳನ್ನ ಮಾಡಿದ್ದಾರೆ. 2023ರಲ್ಲಿ ಸೋತಿರಬಹುದು. ಜನರಲ್ಲಿ ಭಾವನೆ ಮೂಡಬಹುದು. ಎರಡೂವರೆ ವರ್ಷಗಳಾಯ್ತಪ್ಪ. ಆದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಕೇವಲ ಬೇರೆ ಬೇರೆ ಕಾರಣಗಳಿಂದ ಅವರು ಏನು ಮಾಡೋದಕ್ಕೆ ಆಗಿಲ್ಲ. ಈ ಸಲ ಭಾರತೀಯ ಜನತಾ ಪಾರ್ಟಿಯನ್ನು ಕೈ ಹಿಡಿಬೇಕು ಅಂತ ಜನ ತೀರ್ಮಾನ ಮಾಡಿದ್ದಾರೆ ಎಂದರು.

ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಗೆಲುವಿಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಹೆಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಜೋರಾಗಿಯೇ ನಡೀತಾ ಇದೆ. ಶ್ರೀರಾಮುಲು ಕೂಡ ಬಿಜೆಪಿ ಅಭ್ಯರ್ಥಿ ಚರಂತಿಮಠ ಅವರ ಪರ ಮತಯಾಚನೆ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ. ಹೀಗಾಗಿ 5 ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್​ ಗೆಲ್ಲುವುದಿಲ್ಲ. ಇಡೀ ಸಚಿವ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್: ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ, ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ!

ಒಪ್ಪಂದಕ್ಕೆ ಒಪ್ಕೋತೀರೋ ಇಲ್ವೋ.. Kharg ದ್ವೀಪ ಸ್ಫೋಟಿಸ್ತೀವಿ..: ಇರಾನ್ ಗೆ Donald Trump ಅಂತಿಮ ಗಡುವು

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

IPL 2026: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; CSK ವಿರುದ್ಧ RRಗೆ ಭರ್ಜರಿ ಗೆಲುವು

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

SCROLL FOR NEXT