ಎನ್ ಎಸ್ ಬೋಸರಾಜು  
ರಾಜಕೀಯ

ಮೇ.10 ಡೆಡ್ ಲೈನ್ ಅಂತ ಯಾರು ಹೇಳಿದ್ರು, ಇಂತಹ ಹಲವು ದಿನಾಂಕಗಳು ಬರುತ್ತವೆ, ಹೋಗುತ್ತವೆ, ಅವಕ್ಕೆ ಯಾವುದೇ ಮಹತ್ವ ಇಲ್ಲ-ಸಚಿವ ಬೋಸರಾಜು-Video

ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು 55 ವರ್ಷಗಳಿಂದ ಕಾಂಗ್ರೆಸ್ ಪಾರ್ಟಿಯಲ್ಲಿದ್ದೇನೆ, ನಾಯಕರು ಏನೇ ಅಭಿಪ್ರಾಯಗಳನ್ನು ಹೇಳಿದರೂ ತೀರ್ಮಾನವಾಗುವುದು ದೆಹಲಿಯಲ್ಲಿ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದರು.

ವಿಜಯಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾಯಕರು ತಮ್ಮ ಅಭಿಪ್ರಾಯಗಳನ್ನು ಹೇಳುತ್ತಾರೆ, ಆದರೆ ಏನೇ ತೀರ್ಮಾನವಾಗುವುದಿದ್ದರೂ ಹೈಕಮಾಂಡ್ ಗೆ ಬಿಟ್ಟಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಚಿವ ಎನ್ ಎಸ್ ಬೋಸರಾಜು ಹೇಳಿದ್ದಾರೆ.

ಇಂದು ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು 55 ವರ್ಷಗಳಿಂದ ಕಾಂಗ್ರೆಸ್ ಪಾರ್ಟಿಯಲ್ಲಿದ್ದೇನೆ, ನಾಯಕರು ಏನೇ ಅಭಿಪ್ರಾಯಗಳನ್ನು ಹೇಳಿದರೂ ತೀರ್ಮಾನವಾಗುವುದು ದೆಹಲಿಯಲ್ಲಿ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದರು.

ಮೇ 10ಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಡೆಡ್ ಲೈನ್ ನೀಡಲಾಗಿದೆ ಎಂಬ ವದಂತಿ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ,ಯಾರು ಹೇಳಿದರು ನಿಮಗೆ ಎಂದು ಕೇಳಿದರು. ಮೇ 15ಕ್ಕೆ ಡಿ ಕೆ ಶಿವಕುಮಾರ್ ಬರ್ತ್ ಡೇ ಮುನ್ನ ತೀರ್ಮಾನವಾಗಬೇಕೆಂದಾಗಿದೆಯಂತಲ್ಲವೇ ಎಂದು ಕೇಳಿದಾಗ, ಬರ್ತ್ ಡೇಗಳು ಬರುತ್ತವೆ, ಹೋಗುತ್ತವೆ. ಅವರ ಬರ್ತ್ ಡೇಗೂ ನಾಯಕತ್ವ ಬದಲಾವಣೆಗೆ ಸಂಬಂಧವಿಲ್ಲ, ಹೈಕಮಾಂಡ್ ಸಮಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

SCROLL FOR NEXT