ಡಿ ಎನ್ ಜೀವರಾಜ್, ಟಿ ಡಿ ರಾಜೇಗೌಡ 
ರಾಜಕೀಯ

ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ: ಬಿಜೆಪಿ, ಕಾಂಗ್ರೆಸ್ ಗೆ ಸಿಕ್ಕ ಮತಗಳೆಷ್ಟು; ಚುನಾವಣಾಧಿಕಾರಿ ಹೇಳಿದ್ದೇನು?

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ.

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್‌ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ ಸಂಪೂರ್ಣ ಪ್ರಕ್ರಿಯೆ ಇಂದು ಮುಗಿಸಿದೆವು ಎಂದು ಜಿಲ್ಲಾ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳನ್ನು ಅಕ್ರಮ ಮಾಡುವಿಕೆ ಆರೋಪದ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಯಿತು ಎಂದರು.

ಮರು ಎಣಿಕೆಯ ನಂತರ ಅಭ್ಯರ್ಥಿಗಳ ಮತಗಳಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. 2023 ರ ಮತ ಎಣಿಕೆಯಲ್ಲಿ ಮೇಲ್ಮನವಿದಾರ ಡಿ ಎನ್ ಜೀವರಾಜ್ ಅವರಿಗೆ 692 ಮತಗಳು ಬಂದಿದ್ದರೆ, ಮರು ಎಣಿಕೆಯ ನಂತರ ಅದು 690 ಕ್ಕೆ ಇಳಿದಿದೆ.

ಟಿ ಡಿ ರಾಜೇಗೌಡರಿಗೆ ಮೂಲತಃ 569 ಮತಗಳು ಬಂದಿದ್ದವು. ಆದರೆ ಮರು ಎಣಿಕೆಯ ನಂತರ ಅವರ ಮತಗಳ ಸಂಖ್ಯೆ 314 ಕ್ಕೆ ಇಳಿದು 255 ಮತಗಳ ವ್ಯತ್ಯಾಸವಾಗಿದೆ. ಈ ಕುರಿತು ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಸ್ಟ್ರಾಂಗ್ ರೂಂ ನ್ನು ಸೀಲ್ ಮಾಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ