ಶಾಸಕ ಡಿ.ಎನ್ ಜೀವರಾಜ್ 
ರಾಜಕೀಯ

ನೀವು ನಮಗೂ ಡಿಸಿಎಂ: ಬೆದರಿಸುವ ಕೆಲಸ ಮಾಡೋದು ಬೇಡ; ಡಿಕೆಶಿಗೆ ಶಾಸಕ ಜೀವರಾಜ್ ತಿರುಗೇಟು

ಸರ್ಕಾರದಿಂದ ತನಿಖೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ‌ತನಿಖೆ ಚುನಾವಣಾ ಆಯೋಗ ಮಾಡಬೇಕು. ಡಿಕೆಶಿಯವರು ಬೆದರಿಸುವ ಕೆಲಸ ಮಾಡೋದು ಬೇಡ. ಅವರು ನಮಗೂ ಉಪಮುಖ್ಯಮಂತ್ರಿ ಎಂದು ಟಾಂಗ್‌ ಕೊಟ್ಟರು.

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಿರಿಯರು, ಕ್ರೈಮ್ ಆಗಿದೆ ಅಂತೆಲ್ಲ ಬೆದರಿಸಬಾರದು ಎಂದು ಶೃಂಗೇರಿ ಮರು ಎಣಿಕೆಯಲ್ಲಿ ಗೆದ್ದಿರುವ ಶಾಸಕ ಜೀವರಾಜ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದರ ಅವರು ಮತ ಟ್ಯಾಂಪರಿಂಗ್ ಆರೋಪ ತಳ್ಳಿ ಹಾಕಿದರು. ಸರ್ಕಾರದಿಂದ ತನಿಖೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ‌ತನಿಖೆ ಚುನಾವಣಾ ಆಯೋಗ ಮಾಡಬೇಕು. ಡಿಕೆಶಿಯವರು ಬೆದರಿಸುವ ಕೆಲಸ ಮಾಡೋದು ಬೇಡ. ಅವರು ನಮಗೂ ಉಪಮುಖ್ಯಮಂತ್ರಿ ಎಂದು ಟಾಂಗ್‌ ಕೊಟ್ಟರು.

‌ಪೋಸ್ಟಲ್ ಬ್ಯಾಲೆಟ್‌ಗಳನ್ನು ಸೇಫಾಗಿ ಟ್ರಂಕ್‌ನಲ್ಲಿಟ್ಟಿರುತ್ತಾರೆ.‌ ಡಿಕೆಶಿಯವರು ಯಾಕೆ ಈ ರೀತಿ ಮಾತಾಡ್ತಿದ್ದಾರೋ ಗೊತ್ತಿಲ್ಲ. 24 ಗಂಟೆ ಪೊಲೀಸ್ ಕಾವಲು ಹಾಕಿರುವ ಕಡೆ ನಾನು ಹೇಗೆ ಹೋಗಿ ಟ್ಯಾಂಪರಿಂಗ್ ಮಾಡಲು ಆಗುತ್ತದೆಯೇ? ಡಿಕೆಶಿಯವರು ಹಿರಿಯರು ಈಥರ ಮಾತಾಡಬಾರದು ಎಂದರು.

ಕಾಂಗ್ರೆಸ್‌ನವ್ರು ಮತ ಟ್ಯಾಂಪರಿಂಗ್ ಮಾಡಲಾಗಿದೆ ಅಂತ ಆರೋಪ ಮಾಡಿದ್ದಾರೆ. ದೂರು ಕೊಟ್ಟಿದ್ದಾರೆ, ಎಫ್ಐಆರ್ ಹಾಕಿದ್ದಾರೆ. 2023 ರಲ್ಲಿ ಶೃಂಗೇರಿ ಮತ ಎಣಿಕೆ ವಿಳಂಬ ಆಯ್ತು. ಕೊನೆಯಲ್ಲಿ ಪೋಸ್ಟಲ್ ಮತಗಳ ಎಣಿಕೆ ಮಾಡಿದ್ರು. ಕಾಂಗ್ರೆಸ್‌ ನವರು ಹಾಕಿರುವ ಎಫ್ಐಆರ್ ಕಾನೂನು ಬಾಹಿರ ಆಗಿದೆ ಎಂದು ಜೀವರಾಜ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TamilNadu: ರಾಜಕೀಯದ ಮೊದಲ ಪಂದ್ಯದಲ್ಲೇ ನಟ ವಿಜಯ್ ಶತಕ, ಮ್ಯಾಜಿಕ್ ನಂಬರ್ ಗೆ ಬೇಕು 10 ಶಾಸಕರ ಬೆಂಬಲ, TVKಗೆ ಮೊದಲ ಅಗ್ನಿ ಪರೀಕ್ಷೆ!

ಪಂಚರಾಜ್ಯ ಚುನಾವಣೆ ಫಲಿತಾಂಶ: ಎಂಕೆ ಸ್ಟಾಲಿನ್, ಮಮತಾ, ಗೌರವ್ ಗೋಗೋಯ್ ಸೇರಿದಂತೆ ಹೀನಾಯ ಸೋಲು ಕಂಡ ಘಟಾನುಘಟಿಗಳು!

IPL 2026: ಲಕ್ನೋ ವಿರುದ್ಧ 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್!

TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!

ಬಂಗಾಳದ ಗೆಲುವಿನೊಂದಿಗೆ ಇಂದು ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ: ಪ್ರಧಾನಿ ಮೋದಿ

SCROLL FOR NEXT