ಸಿಎಂ ಸಿದ್ದರಾಮಯ್ಯ  
ರಾಜಕೀಯ

ದಾವಣಗೆರೆ ಉಪಚುನಾವಣೆಯಲ್ಲಿ SDPI ಕಡೆಗೆ ಮುಸ್ಲಿಂ ಮತಗಳ ಪಲ್ಲಟ: ಪಕ್ಷ ಮಟ್ಟದಲ್ಲಿ ತನಿಖೆ; ಸಿದ್ದರಾಮಯ್ಯ

ದಾವಣಗೆರೆಯಲ್ಲಿ ಒಟ್ಟು 56 ಸಾವಿರ ಮುಸ್ಲಿಮರು ಮತ ಚಲಾಯಿಸಿದ್ದು, ಈ ಪೈಕಿ, ಕಾಂಗ್ರೆಸ್​ಗೆ 35 ಸಾವಿರ ಮತ ಬಂದಿದೆ. ನಮ್ಮ ಲೆಕ್ಕಾಚಾರ ಮೀರಿ, ಎಸ್‌ಡಿಪಿಐಗೆ ಈ ಬಾರಿ ಹೆಚ್ಚು ಮತ ಬಿದ್ದಿದೆ. ನಮಗೆ ಏಕೆ ಕಡಿಮೆ ಮತ ಬಂದಿವೆ ಎಂದು ವಿಚಾರ ಮಾಡುತ್ತೇವೆ ಎಂದರು.

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್​​ಡಿಪಿಐಗೆ ಮತ ಬಿದ್ದಿದೆ. ನಾವು ಎಲ್ಲಿ ಎಡವಿದ್ದೇವೆ ಎಂಬುದನ್ನು ಪಕ್ಷದ ಮಟ್ಟದಲ್ಲಿ ಪರಿಶೀಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೂ, ಮುಸ್ಲಿಂ ಮತಗಳು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡೆಗೆ ಪಲ್ಲಟಗೊಂಡಿರುವುದರಿಂದ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಹೇಳಿದರು.

ದಾವಣಗೆರೆಯಲ್ಲಿ ಒಟ್ಟು 56 ಸಾವಿರ ಮುಸ್ಲಿಮರು ಮತ ಚಲಾಯಿಸಿದ್ದು, ಈ ಪೈಕಿ, ಕಾಂಗ್ರೆಸ್​ಗೆ 35 ಸಾವಿರ ಮತ ಬಂದಿದೆ. ನಮ್ಮ ಲೆಕ್ಕಾಚಾರ ಮೀರಿ, ಎಸ್‌ಡಿಪಿಐಗೆ ಈ ಬಾರಿ ಹೆಚ್ಚು ಮತ ಬಿದ್ದಿದೆ. ನಮಗೆ ಏಕೆ ಕಡಿಮೆ ಮತ ಬಂದಿವೆ ಎಂದು ವಿಚಾರ ಮಾಡುತ್ತೇವೆ ಎಂದರು.

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ 2028ರ ಚುನಾವಣೆಗೆ ದಿಕ್ಸೂಚಿ ಎಂದು ಬಿಜೆಪಿಯವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳುತ್ತಿದ್ದರು. ಈ ಎರಡೂ ಕ್ಷೇತ್ರಗಳನ್ನು ನಾವು ಗೆದ್ದಿದ್ದೇವೆ. ಬಿಜೆಪಿಯವರ ಪ್ರಕಾರ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಾಯಿತು ಎಂದರು.

ಕಾಂಗ್ರೆಸ್ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ನಾಸೀರ್ ಅಹ್ಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೈಗೊಂಡ ಅಮಾನತು ಕ್ರಮವನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ತಮಿಳುನಾಡು ಚುನಾವಣೆಯಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಗೆಲುವು ಸಾಧಿಸುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ತಮಿಳುನಾಡಿನ ಜನರು ಬದಲಾವಣೆ ಬಯಸಿದ್ದಾರೆ. ಯುವ ಜನಾಂಗ ನಟ ವಿಜಯ್​ಗೆ ಮತ ಹಾಕಿದ್ದಾರೆ. ಇದು ಅಚ್ಚರಿಯ ಫಲಿತಾಂಶ. ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುವುದಿಲ್ಲ.ಕೇರಳದಲ್ಲಿ ನಿರೀಕ್ಷೆಯಂತೆ ನಾವು ಗೆದ್ದಿದ್ದೇವೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK–ಕಾಂಗ್ರೆಸ್ ಮೈತ್ರಿ: ಸಂಪುಟದಲ್ಲಿ 2 ಸ್ಥಾನಕ್ಕೆ 'ಕೈ' ಬೇಡಿಕೆ, ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆ ಬಹುತೇಕ ಖಚಿತ..!

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ: 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್; ಸಿಎಂ ಸಿದ್ದರಾಮಯ್ಯ

ಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್...?

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

SCROLL FOR NEXT