ಡಿ ಎನ್ ಜೀವರಾಜ್ 
ರಾಜಕೀಯ

ಶೃಂಗೇರಿ: ಕೊನೆಗೂ ಶಾಸಕರಾಗಿ ಡಿ.ಎನ್ ಜೀವರಾಜ್ ಇಂದು ಪ್ರಮಾಣವಚನ

ಕೊನೆಗೂ ಸಭಾಧ್ಯಕ್ಷರು ಸಮಯ ನಿಗದಿಪಡಿಸಿದ್ದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಜೀವರಾಜ್ ಖುಷಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಅಪರಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್ ಸಮಯ ನಿಗದಿಪಡಿಸಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಬಿಜೆಪಿ ವಿಳಂಬ ಆರೋಪ ಮಾಡಿತ್ತು. ಬಿಜೆಪಿ ಪ್ರತಿನಿಧಿ ಮಂಡಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸ್ಪೀಕರ್ ಲಭ್ಯವಿಲ್ಲದಿದ್ದರೆ ತಾವೇ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಮನವಿ ಮಾಡಿದ್ದರು.

ಕೊನೆಗೂ ಸಭಾಧ್ಯಕ್ಷರು ಸಮಯ ನಿಗದಿಪಡಿಸಿದ್ದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಜೀವರಾಜ್ ಖುಷಿ ಹಂಚಿಕೊಂಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಜೀವರಾಜ್ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಕೋರ್ಟ್ ಮೊರೆಹೋಗಿದ್ದರು. ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಗೆದ್ದು ಶಾಸಕರಾಗಿ ಘೋಷಿಸಲ್ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

'ಚಿಂತೆ ಮಾಡುತ್ತ ಕೂರಬೇಡಿ'; ಟಾಕ್ಸಿಕ್ ಸೋಲು ಒಪ್ಪಿಕೊಂಡ ಯಶ್‌: ಆಪ್ತನ ಬಳಿ ರಾಕಿಂಗ್ ಸ್ಟಾರ್ ಹೇಳಿದ್ದೇನು?

Duleep Trophy: 'ತಗೋ... ತಗೋ..ಮೊದ್ಲು DRS ತಗೋ'.. ನಾಯಕ ಇಶಾನ್ ಕಿಶನ್ ಗೆ ದುಂಬಾಲು ಬಿದ್ದ 'ಸೂಪರ್ ಡೆಪ್ಯುಟಿ' Vaibhav Sooryavanshi, ಆಗಿದ್ದೇನು? Video

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?