ಬಿ ವೈ ವಿಜಯೇಂದ್ರ  
ರಾಜಕೀಯ

'ಗೃಹಲಕ್ಷ್ಮಿ ಚುನಾವಣೆ ಲಕ್ಷ್ಮಿಯಾಗಿದೆ, ಎಲೆಕ್ಷನ್ ಟೈಂ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ': ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಬೀಗುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದಿದ್ದರೆ ಉಪ ಚುನಾವಣೆ ಸಂದರ್ಭ 15 ದಿನಗಳ ಕಾಲ ಬಾಗಲಕೋಟೆಯಲ್ಲಿ ಯಾಕೆ ಕೂರಬೇಕಾಗಿತ್ತು ಎಂದು ಕೇಳಿದರು.

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಇಂದು ಚುನಾವಣೆ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ನೀಡುವ ಬದಲು ಉಪ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಮುಂದಿನ ಕಂತಿನ ಹಣವನ್ನು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಬಂದಾಗಲೇ ಬಿಡುಗಡೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

ಚಿತ್ರದುರ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಬೀಗುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದಿದ್ದರೆ ಉಪ ಚುನಾವಣೆ ಸಂದರ್ಭ 15 ದಿನಗಳ ಕಾಲ ಬಾಗಲಕೋಟೆಯಲ್ಲಿ ಯಾಕೆ ಕೂರಬೇಕಾಗಿತ್ತು,

ಸರ್ಕಾರ ಬಡವರಿಗೆ ಯೋಜನೆಗಳನ್ನು ನೀಡಲಿ, ಯಾರೂ ಬೇಡ ಎನ್ನಲ್ಲ, ಅಲ್ಲದೇ ಇವರೊಬ್ಬರೇ ಯೋಜನೆಗಳನ್ನು ಕೊಟ್ಟಿಲ್ಲ. ಯಡಿಯೂರಪ್ಪನವರು ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಹೆಣ್ಣು ಮಕ್ಕಳಿಗೆ ಸೈಕಲ್ ಸೇರಿ ಇನ್ನೂ ಹಲವಾರು ಯೋಜನೆಗಳನ್ನು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನವರು ಜನರಿಗೆ ಆಮಿಷವೊಡ್ಡುವ ರೀತಿ ಯೋಜನೆಗಳನ್ನು ನೀಡುತ್ತಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ದೂರದೃಷ್ಟಿಯಿಂದ ಭಾಗ್ಯಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ತಂದಿದ್ದರು ಎಂದರು.

ಸೋಲಿನಿಂದ ಹತಾಶೆಗೊಂಡಿಲ್ಲ

ಉಪ ಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಂಥ ದಿಟ್ಟ ನಾಯಕತ್ವ ದೇಶಕ್ಕೆ ಸಿಕ್ಕಿದೆ. ನಿತಿನ್ ನಬಿನ್ ಅವರಂಥ ಯುವ ರಾಷ್ಟ್ರೀಯ ಅಧ್ಯಕ್ಷರು ನೇತೃತ್ವ ವಹಿಸಿಕೊಂಡಿದ್ದಾರೆ. ಅಮಿತ್ ಶಾ ಅವರಂಥ ಚುನಾವಣಾ ಚಾಣಕ್ಯ ನಮ್ಮ ಜೊತೆಗಿದ್ದಾರೆ. ಹಾಗಾಗಿ ಉಪ ಚುನಾವಣೆ ಸೋಲಿನ ಸಂಬಂಧ ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಈ ಉಪ ಚುನಾವಣೆ ಸೋಲಿನಿಂದ ಬಿಜೆಪಿ ಮತ್ತು ಕಾರ್ಯಕರ್ತರು ಹೆದರುವುದಿಲ್ಲ. ಇವೆಲ್ಲವನ್ನೂ ಮೀರಿ ಸಂಘಟನೆ ಮಾಡುತ್ತೇವೆ. ಹಿರಿಯರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಸರ್ಕಾರ ತರುತ್ತೇವೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

Operation Sindoorಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ

TVK ವಿಜಯ್ ಗೆ ಮತ್ತೊಂದು ಹಿನ್ನಡೆ: ರಾತ್ರೋರಾತ್ರಿ ದಳಪತಿಗೆ ನೀಡಿದ್ದ ಭದ್ರತೆ ವಾಪಸ್!

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ, ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ

SCROLL FOR NEXT