ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ H. D. ದೇವೇಗೌಡ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು. 
ರಾಜಕೀಯ

ಪ್ರಧಾನಿ ಮೋದಿಯನ್ನು ಟೀಕಿಸುವ ಮುನ್ನ ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು: HD ದೇವೇಗೌಡ

ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.

ಹಾಸನ ಜಿಲ್ಲೆ ಮೊಸಳೆಹೊಸಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಕಷ್ಟದಿಂದ ಜಾಗತಿಕ ಆರ್ಥಿಕ ವ್ಯವಸ್ಥೆ ಕುಸಿತದ ಅಂಚಿನಲ್ಲಿರುವ ಈ ಸೂಕ್ಷ್ಮ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ರಾಜತಾಂತ್ರಿಕವಾಗಿ ನಿಭಾಯಿಸುತ್ತಿರುವ ಸಂದರ್ಭದಲ್ಲಿ, ಅವರನ್ನು ಟೀಕಿಸುವ ಮೊದಲು ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು ಎಂದು ಹೇಳಿದರು.

ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.

1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತಾವಧಿಯನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು ಎಂದ ಅವರು, ಆಗ ಇಂದಿರಾ ಗಾಂಧಿ ಜನರಿಗೆ ಒಂದು ದಿನ ಚಹಾ ಸೇವನೆ ಬಿಡಲು, ಊಟವನ್ನು ಕಡಿಮೆ ಮಾಡಲು ಅಥವಾ ದಿನಕ್ಕೆ ಎರಡು ಬಾರಿ ಕುಡಿಯುತ್ತಿದ್ದ ಚಹಾವನ್ನು ಒಂದೇ ಬಾರಿಗೆ ಇಳಿಸಲು ಮನವಿ ಮಾಡಿದ್ದರು ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಸಮರ್ಥಿಸಿಕೊಂಡ ದೇವೇಗೌಡ, ಜವಾಬ್ದಾರಿಯುತ ರಾಜಕಾರಣಿಯಾಗಿ ಸಿದ್ದರಾಮಯ್ಯ ಅವರು ಜಾಗತಿಕ ನಾಯಕನಾಗಿರುವ ಪ್ರಧಾನಿಯನ್ನು ಟೀಕಿಸುವ ಮೊದಲು ಎರಡು ಬಾರಿ ಯೋಚಿಸಬೇಕು. ದಾಖಲೆ 17 ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯ ಅವರು ಪ್ರಧಾನಿ ವಿರುದ್ಧ ಟೀಕೆ ಮಾಡುವ ಮುನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel