ಹೆಚ್ ಡಿ ದೇವೇಗೌಡ 
ರಾಜಕೀಯ

ಸಿಎಂ ಸಿದ್ದರಾಮಯ್ಯ ನನ್ನ ಸ್ನೇಹಿತ, ಸಹೋದ್ಯೋಗಿ: ಮನವಿ ಮಾಡಿ ಮಾಜಿ ಪ್ರಧಾನಿ H D ದೇವೇಗೌಡ ಏನೆಂದರು?-Video

ನಾನು ಹಿಂದೆ ಅಳುತ್ತಿದ್ದನ್ನು ಕೆಲವರು ಈಗ ಲೇವಡಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದ ವ್ಯವಸ್ಥೆಯನ್ನು ನೋಡಿ ನನಗೆ ಈಗ ನಗು ಬರುತ್ತಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಸ್ನೇಹಿತರು ಮತ್ತು ಹಳೆಯ ಸಹದ್ಯೋಗಿ. ನಾವಿಬ್ಬರೂ ಜೊತೆಯಾಗಿ ಕೆಲಸವನ್ನು ಮಾಡಿದ್ದೇವೆ ಎಂದರು.

ಬೆಂಗಳೂರು: ಬಿಡದಿ ಟೌನ್’ಶಿಪ್ ವಿಚಾರದಲ್ಲಿ ರೈತರಿಂದ ಎರಡು ಏಟು ತಿನ್ನಲೂ ಸಿದ್ದ ಎಂದು ಕೆಲವರು ಹೇಳಿದ್ದಾರೆ. ಅವರು ಮೊದಲು ಏಟು ತಿಂದು ಬರಲಿ ಆಮೇಲೆ ನಾನು ಅಲ್ಲಿಗೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ದೇವೇಗೌಡರು, ನಾನು ಹಿಂದೆ ಅಳುತ್ತಿದ್ದನ್ನು ಕೆಲವರು ಈಗ ಲೇವಡಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದ ವ್ಯವಸ್ಥೆಯನ್ನು ನೋಡಿ ನನಗೆ ಈಗ ನಗು ಬರುತ್ತಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಸ್ನೇಹಿತರು ಮತ್ತು ಹಳೆಯ ಸಹೋದ್ಯೋಗಿ. ನಾವಿಬ್ಬರೂ ಜೊತೆಯಾಗಿ ಕೆಲಸವನ್ನು ಮಾಡಿದ್ದೇವೆ.

ಆದರೆ, ಇಲ್ಲಿ ನಡೆಯುತ್ತಿರುವುದನ್ನು ನೋಡಿ ನನಗೆ ಬಹಳ ದುಃಖವಾಗುತ್ತಿದೆ. ಅದೇನೋ ಸಿಎಂ ಆಗಬೇಕು ಎಂದು ಒಡಂಬಡಿಕೆ ಆಗಿದೆಯಂತೆ, ನಿಮ್ಮ ಮುಂದೆ ಮನೋರಂಜನೆ ಮಾಡುತ್ತಿದ್ದಾರೆ. ಬಿಡದಿ ರೈತರ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಸಿದ್ದರಾಮಯ್ಯನವರಿಗೆ ಪತ್ರ ಬರೆದ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದ ದೇವೇಗೌಡರು, ಅವರಿಗೆ ಪತ್ರ ಬರೆದಿದ್ದಾರೆ. "ನೀವು ನನ್ನ ಜೊತೆ ಕೆಲಸವನ್ನು ಮಾಡಿದ್ದೀರಿ. ನಿಮ್ಮ ಸಾಮಾಜಿಕ ನ್ಯಾಯದ ಮಾತಿನ ಬಗ್ಗೆ ನನಗೂ ಅರಿವಿದೆ. ಬೆಂಗಳೂರಿನ ಸುತ್ತಮುತ್ತ ಸುಮಾರು ಇಪ್ಪತ್ತು ಸಾವಿರ ಎಕರೆ ಭೂಮಿ ಯಾರ ಹೆಸರಿನಲ್ಲಿದೆ ಎನ್ನುವ ಅಂಶವನ್ನು ಮುಂದಿಟ್ಟುಕೊಂಡು ತನಿಖೆ ಮಾಡಿ. ಬೆಂಗಳೂರು ಉಸ್ತುವಾರಿ ಹೊತ್ತಿರುವವರ ಒತ್ತಡಕ್ಕೆ ನೀವು ಮಣಿಯಬೇಡಿ. ಬಿಡದಿ ರೈತರ ಸಮಸ್ಯೆಯನ್ನು ಯಾರಿಂದಾದರೂ ಕೇಳಿ ತಿಳಿದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

ಹಿಂದೂ ಮಹಿಳೆ ಪರ ಸಹಾಯ ಕೋರಿದ ಮುಸ್ಲಿಂ ಮಹಿಳೆಯರು: ಇದು ನಮ್ಮ ಭಾರತ, ಇದನ್ನು ಉಡುಪಿಯ ಬಿಜೆಪಿಯವರು ನೋಡಿ ಕಲೀಬೇಕು ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-Video

SCROLL FOR NEXT