ಕೆಎನ್ ರಾಜಣ್ಣ-ಸಿದ್ದರಾಮಯ್ಯ 
ರಾಜಕೀಯ

ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ; Video

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು...

ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು. ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ ಸಮಾರಂಭದಲ್ಲಿ ಮಾತನಾಡಿದ ರಾಜಣ್ಣ, ಸಿದ್ದರಾಮಯ್ಯ ಬದಲಾವಣೆ ಬಯಸಿದರೆ, ಪರಮೇಶ್ವರ ಮುಖ್ಯಮಂತ್ರಿಯಾಗಬೇಕು ಎಂದು ನಾವು ಹೇಳುತ್ತಿದ್ದೇವೆ ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಎಂಟು ವರ್ಷಗಳ ಕಾಲ ಪರಮೇಶ್ವರ ಅವರ ಅಧಿಕಾರಾವಧಿಯನ್ನು ನೆನಪಿಸಿಕೊಂಡ ರಾಜಣ್ಣ, 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೆ ಅವರೇ ಮುಖ್ಯಮಂತ್ರಿಯಾಗುತ್ತಿದ್ದರು ಎಂದರು. ಕೇರಳ ಭೇಟಿಯ ಸಂದರ್ಭದಲ್ಲಿ ಸಂಭಾವ್ಯ ಉನ್ನತ ಮಟ್ಟದ ಚರ್ಚೆಯ ಬಗ್ಗೆಯೂ ರಾಜಣ್ಣ ಸುಳಿವು ನೀಡಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಅಲ್ಲಿಗೆ ಹೋಗುತ್ತಾರೆ. ಅಲ್ಲಿ ಏಕೆ ಚರ್ಚಿಸಬಾರದು? ಅದು ಕೂಡ ಒಂದು ಸಾಧ್ಯತೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯವರ ಪ್ರವಾಸ ಯೋಜನೆಯನ್ನು ಉಲ್ಲೇಖಿಸುತ್ತಾ, ನಾನು ಅವರ ಪ್ರವಾಸ ಕಾರ್ಯಕ್ರಮವನ್ನು ನೋಡಿದೆ. ಸಿಎಂ ಬೆಳಗ್ಗೆ 10 ಗಂಟೆಗೆ ಕೇರಳ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದು 45 ನಿಮಿಷಗಳಲ್ಲಿ ಮುಗಿಯುತ್ತದೆ. ಅವರು ನಂತರ ಹಿಂತಿರುಗಬಹುದಿತ್ತು. ಆದರೆ ಅವರು ಮಧ್ಯಾಹ್ನ 3 ಗಂಟೆಯವರೆಗೆ ಅಲ್ಲಿಯೇ ಇರುತ್ತಾರೆ. ನನ್ನ ವೈಯಕ್ತಿಕ ನಿರೀಕ್ಷೆಯೆಂದರೆ ನಾಯಕತ್ವ ಬದಲಾವಣೆ ಅಂತಿಮವಾಗಬಹುದು. ಎಲ್ಲರೂ ಇರುವುದರಿಂದ ಏನನ್ನಾದರೂ ಚರ್ಚಿಸಬಹುದು ಎಂದು ನಾನು ಭಾವಿಸುತ್ತಿದ್ದೇನೆ ಎಂದು ರಾಜಣ್ಣ ಹೇಳಿದರು.

"ಮೂರು ಅಥವಾ ನಾಲ್ಕು ಜನರು ಒಟ್ಟಾಗಿ ಸೇರಿ ಐದು ನಿಮಿಷಗಳ ಕಾಲ ಮಾತನಾಡಿ ಒಂದು ಅಭಿಪ್ರಾಯ ಮಂಡಿಸುತ್ತಾರೆ. ರಾಹುಲ್ ಗಾಂಧಿಯವರ ಬಾಯಿಂದ ಏನೇ ಬಂದರೂ ಅದನ್ನು ಜಾರಿಗೆ ತರಲಾಗುತ್ತದೆ ಎಂದರು. ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿದ ನಂತರ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ ಈ ಹೇಳಿಕೆ ಬಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

username feature: ವಾಟ್ಸಾಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್ ಗೆ ಕೇಂದ್ರದ ನೋಟಿಸ್!

ಬಂಡಾಯ ಬಣದಿಂದ ECI ಮುಂದೆ ಪಕ್ಷದ ಮೇಲೆ ಹಕ್ಕು ಮಂಡನೆ: ತೀವ್ರಗೊಂಡ ಟಿಎಂಸಿ ಆಂತರಿಕ ಕಲಹ

ಪಾಕ್ ಸೇನೆ ಕಾಶ್ಮೀರಿಗಳಿಗೆ ಕೈಗೆ ಬಂದೂಕು ನೀಡಿ, ಈಗ ಅವರನ್ನು ಉಗ್ರರು ಎಂದು ಕರೆಯುತ್ತಿದೆ: POK ನಾಯಕ

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!