ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; SIR ಜಾರಿಯಿಂದ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ ಎಂದರು.

ಸಿಂಧನೂರು: ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿದ್ದು , ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಧ್ಯೆ 6 ವಿಧಾನಸಭಾ ಉಪಚುನಾವಣೆ ನಡೆದಿದ್ದು , ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರಕ್ಕೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದು ಸಾಬೀತಾಗಿದೆ ಎಂದರು.

ಎಸ್ಐಆರ್ ಜಾರಿಯಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲಿ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಾಮಾನ್ಯ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದ 'ಮುಗಿದಿದೆ'; ನೀಚರೊಂದಿಗೆ ವ್ಯವಹರಿಸಲು ಬಯಸುವುದಿಲ್ಲ: ಡೊನಾಲ್ಡ್ ಟ್ರಂಪ್

ಪುಣೆಯಲ್ಲಿ ಕಟ್ಟಡದ ಮೇಲೆ ಬಿದ್ದ ಕಸದ ರಾಶಿ, ಬಿಲ್ಡಿಂಗ್ ಕುಸಿತ; ಅವಶೇಷಗಳಡಿ ಸಿಲುಕಿದ 16 ಮಂದಿ

ಶೋಪಿಯಾನ್‌ ಎನ್‌ಕೌಂಟರ್‌: ಅಡಗಿಕುಳಿತಿದ್ದ LET ಉಗ್ರನ ಹೊಡೆದುರುಳಿಸಿದ ಸೇನಾಪಡೆ..! Video

FIFA World Cup 2026: ಜನಾಂಗೀಯ ನಿಂದನೆಯ ಸನ್ನೆ, ಈಜಿಪ್ಟ್ ಕೋಚ್ ಜೊತೆ ಮೆಸ್ಸಿ ಭಾರಿ ಜಗಳ! Video

ಬಾರೂಯೀಪುರ್ ಅತ್ಯಾಚಾರ ಪ್ರಕರಣ: ಪಾಪದ ಕೃತ್ಯಕ್ಕೆ ತಕ್ಕ ಶಿಕ್ಷೆ: ಅವನ ಮುಖ ನೋಡಲ್ಲ, ಶವ ಕೂಡ ಮನೆಗೆ ತರಲ್ಲ; ಆರೋಪಿ ತಾಯಿ ಮಾತು!