ಡಿ ಕೆ ಶಿವಕುಮಾರ್  
ರಾಜಕೀಯ

'ಪ್ರತಿದಿನ, ಪ್ರತಿ ಮುಹೂರ್ತ ನನಗೆ ಒಳ್ಳೆಯದೇ, ನನ್ನ ನಿಷ್ಠಾವಂತರು ಎಂದೇನಿಲ್ಲ, ಎಲ್ಲಾ 136 ಶಾಸಕರು ನಮ್ಮವರೇ': ಡಿ ಕೆ ಶಿವಕುಮಾರ್-Video

ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಕೂಡ ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡು ನಮ್ಮ 5 ಗ್ಯಾರಂಟಿಗಳಿಗೆ ಗೌರವ ನೀಡಿದೆ.

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಈ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಿದೆ. ಕೊಟ್ಟಿರುವ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂಬ ತೃಪ್ತಿ ಇದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಕೂಡ ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡು ನಮ್ಮ 5 ಗ್ಯಾರಂಟಿಗಳಿಗೆ ಗೌರವ ನೀಡಿದೆ. ಕೇಂದ್ರ ಸರ್ಕಾರ, ಬಿಜೆಪಿ ಮತ್ತು ಇತರ ರಾಜಕೀಯ ಪಕ್ಷಗಳು ಸಹ ನಮ್ಮಂತೆ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ಜನರನ್ನು ಮೇಲೆತ್ತುವ ರೀತಿಯ ಯೋಜನೆಗಳಿದ್ದು ಎಲ್ಲರಿಗೂ ಮಾದರಿಯಾಗಿದೆ ಎಂದರು.

ನಾವು ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಹೈಕಮಾಂಡ್ ದೆಹಲಿಗೆ ಕರೆದಾಗ ಹೋಗುತ್ತೇವೆ, ಜಿಬಿಎ ಚುನಾವಣೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲು ನಾನು ಮತ್ತು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಲಿದ್ದೇವೆ ಎಂದರು.

ನನಗೆ ನಿಷ್ಠಾವಂತ ಶಾಸಕರು ಎಂದೇನಿಲ್ಲ, ಎಲ್ಲಾ ಶಾಸಕರು ನಮ್ಮವರೇ.ಮುಖ್ಯಮಂತ್ರಿಗಳು ಸಹ ನಮ್ಮ ಮುಖ್ಯಮಂತ್ರಿಗಳು ಎಂದರು. ಈ ಬಾರಿ ಏನಾದರೂ ಗುಡ್ ನ್ಯೂಸ್ ತರುತ್ತೀರಾ ಎಂದು ಕೇಳಿದಾಗ ಪ್ರತಿದಿನವೂ ನನಗೆ ಒಳ್ಳೆಯ ದಿನವೇ, ಪ್ರತಿಮುಹೂರ್ತವೂ ನನಗೆ ಒಳ್ಳೆಯ ಮುಹೂರ್ತವೇ ಎಂದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್ ಸಂಪುಟ ವಿಸ್ತರಣೆ: 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ; AIADMK ಹೊರಗಿಟ್ಟ ದಳಪತಿ

ಪ್ರಮಾಣ ವಚನ ಸ್ವೀಕಾರದ ವೇಳೆ ಕಾಂಗ್ರೆಸ್ ನಾಯಕನಿಗೆ ತಿದ್ದಿ, ಬುದ್ಧಿ ಹೇಳಿದ ಗವರ್ನರ್; ನೂತನ ಸಚಿವ ಮಾಡಿದ ತಪ್ಪೇನು?

ಹಾರ್ಮುಜ್ ಜಲಸಂಧಿ ಮೇಲೆ ಮತ್ತಷ್ಟು ಹಿಡಿತ ಸಾಧಿಸಲು ಗಡಿಗಳನ್ನು ಹೊಸದಾಗಿ ಗುರುತಿಸಿದ ಇರಾನ್!

ಇರಾನ್ ವಿರುದ್ಧದ ಯುದ್ಧ ತಂತ್ರದಲ್ಲಿ ಬಿರುಕು; ಇಸ್ರೇಲ್-ಅಮೆರಿಕಾ ನಡುವೆ ಭಿನ್ನಮತ ಸ್ಫೋಟ, ಟ್ರಂಪ್ ರಾಜತಾಂತ್ರಿಕ ನಡೆಗೆ ನೆತನ್ಯಾಹು ಕೆಂಡಾಮಂಡಲ..!

ಧರ್ಮ, ಕಾನೂನು, ನೈತಿಕತೆ ಇಲ್ಲದ, ಸ್ವಂತ ಜನರ ಮೇಲೆಯೇ ಬಾಂಬ್ ಹಾಕುವ ದೇಶ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಗುಡುಗಿದ ಭಾರತ..!

SCROLL FOR NEXT