ಡಿ ಕೆ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ  
ರಾಜಕೀಯ

ಆ ಹುಡುಗನ ಸ್ಟೇಟಸ್ಸೇ ಗೊತ್ತಿಲ್ಲ ಎಂದ ಡಿ.ಕೆ ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಡಿ ಕೆ ಶಿವಕುಮಾರ್, 136 ಜನ ಶಾಸಕರಿದ್ದರೂ ಏನು ಮಾಡಿದ್ದೀರಿ ಎನ್ನುವ ನಿಖಿಲ್ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, ಆ ಹುಡುಗನಿಗೆ ಉತ್ತರ ಕೊಡಲು ನನಗೆ ಇಷ್ಟವಿಲ್ಲ ಎಂದರು.

ಬೆಂಗಳೂರು: ಆ ಹುಡುಗನಿಗೆ ಉತ್ತರ ಕೊಡಲು ನನಗೆ ಇಷ್ಟವಿಲ್ಲ. ಸ್ಥಳೀಯ ನಾಯಕರು ಯಾರಾದರೂ ಉತ್ತರ ಕೊ ಡುತ್ತಾರೆ. ಅಷ್ಟಕ್ಕೂ ಅವರ ಸ್ಟೇಟಸ್ ನನಗೆ ಗೊತ್ತಿಲ್ಲ. ಪಕ್ಷದ ಅಧ್ಯಕ್ಷರಾದರೆ ಉತ್ತರ ಕೊಡಬಹುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ವ್ಯಂಗ್ಯವಾಡಿದ್ದಾರೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಡಿ ಕೆ ಶಿವಕುಮಾರ್, 136 ಜನ ಶಾಸಕರಿದ್ದರೂ ಏನು ಮಾಡಿದ್ದೀರಿ ಎನ್ನುವ ನಿಖಿಲ್ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, ಆ ಹುಡುಗನಿಗೆ ಉತ್ತರ ಕೊಡಲು ನನಗೆ ಇಷ್ಟವಿಲ್ಲ ಎಂದರು.

ಡಿ.ಕೆ.ಶಿವಕು ಮಾರ್ ಡಿಸಿಎಂ ಆಗಿರುವ ಸ್ಟೇಟಸ್ ನಾಡಿನ ಜನರ ಭಿಕ್ಷೆ

ಡಿ ಕೆ ಶಿವಕುಮಾರ್ ಅವರು ದುಡ್ಡಿನ ಮದ ತಲೆಗೆ ಏರಿ ಹೆಚ್ಚು ಮಾತನಾಡದೆ, ತಲೆ ತಗ್ಗಿಸಿ ಜನರಿಗೆ ಗೌರವದಿಂದ ದುಡಿಯುವ ಕೆಲಸ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ‘ನಿಖಿಲ್ ಸ್ಟೇ ಟಸ್ ಏನು ’ ಹೇಳಿಕೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು .

ಸುದ್ದಿಗಾರರೊಂದಿಗೆ ಮಾತನಾಡಿ, ನಿಖಿಲ್ ಕುಮಾರಸ್ವಾಮಿ ಸ್ಟೇಟಸ್ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾ ರೆ. ಅವರು ಒಂದು ಅರಿಯಲಿ, ಡಿಸಿಎಂ ಆಗಿರುವ ಸ್ಟೇಟಸ್ ನಾಡಿನ ಜನರ ಭಿಕ್ಷೆ. ಅದನ್ನು ಕಣ್ಣಿಗೆ ಒತ್ತಿಕೊಂಡು ದುರಹಂಕಾ ರ ಪಡದೆ ಅಧಿಕಾರ ನಡೆಸಲಿ ಎಂದರು .

ನಿಖಿಲ್ ಕುಮಾರಸ್ವಾ ಮಿ ಏನೆಂದು ಜನ ತೋರಿಸಿಕೊಡ್ತಾರೆ, ಈ ಬಗ್ಗೆ ಮಿ.ಶಿವಕುಮಾರ್ ತಲೆ ಕೆಡಿಸಿಕೊಳ್ಳೋದು ಬೇಡ, ಇಷ್ಟು ಲಘುವಾಗಿ ಮಾತನಾಡುವುದೂ ಬೇಡ. ಮಾತೆತ್ತಿದರೆ ಅವರ ಸಹೋದರ ಕೂಲಿ ಸಿಕ್ಕಿಲ್ಲ, ಕೂಲಿ ಸಿಕ್ಕಿಲ್ಲ ಅಂತ ಬೀದಿಯಲ್ಲಿ ಬಾಯಿ ಬಡಿದುಕೊಂಡು ಓಡಾಡುತ್ತಿದ್ದಾರೆ. ಅವರು ಹತಾಶರಾಗಿ ಹೀಗೆ ಮಾತಾಡ್ತಾ ಇದ್ದಾರೆ. ನಿಖಿಲ್ ಬಗ್ಗೆ ಚರ್ಚೆ ಬೇಡ, 2028ಕ್ಕೆ ಇದೇ ಡಿ.ಕೆ ಶಿವಕುಮಾರ್ ಮಾಜಿ ಆಗ್ತಾರೆ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ, ಮಾತಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ, ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆ ಯಾಚಿಸಲು ವಿಜಯೇಂದ್ರ ಆಗ್ರಹ!

ಪ್ರಮಾಣ ವಚನ ಸ್ವೀಕಾರದ ವೇಳೆ ಕಾಂಗ್ರೆಸ್ ನಾಯಕನಿಗೆ ತಿದ್ದಿ, ಬುದ್ಧಿ ಹೇಳಿದ ಗವರ್ನರ್; ನೂತನ ಸಚಿವ ಮಾಡಿದ ತಪ್ಪೇನು?

ವಿಜಯ್ ಸಂಪುಟ ವಿಸ್ತರಣೆ: 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ; AIADMK ಹೊರಗಿಟ್ಟ ದಳಪತಿ

ಬೆಂಗಳೂರಿನಲ್ಲಿ ಮುಸ್ಲಿಂ ಪ್ರೇಮಿಯೊಂದಿಗೆ ವಾಸ: ಯುವತಿಯ ಮಾನಸಿಕ ಪರೀಕ್ಷೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿಯನ್ನೇ ಹಿಂದಿಕ್ಕಿದ ‘Cockroach Janta Party’; ಐದೇ ದಿನದಲ್ಲಿ 10 ಮಿಲಿಯನ್ ಫಾಲೋವರ್ಸ್!

SCROLL FOR NEXT