ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ 
ರಾಜಕೀಯ

30ಕ್ಕೂ ಹೆಚ್ಚು 'ಕೈ' ಶಾಸಕರಿಂದ ಹೈಕಮಾಂಡ್ ಭೇಟಿ: ಸಂಪುಟ ಪುನಾರಚನೆಯಾಗದಿದ್ದರೆ ಏನು ಮಾಡಬೇಕೆಂದು ಗೊತ್ತು; ಬೇಳೂರು ಗೋಪಾಲಕೃಷ್ಣ

'ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ, ನೀವು ನಾಯಕತ್ವವನ್ನು ಕೇಳಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಕನಿಷ್ಠ 30-35 ಶಾಸಕರು ಮೇ 28 ಅಥವಾ 29 ರೊಳಗೆ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದ್ದು, ಅವರಲ್ಲಿ ಸುಮಾರು 20 ಜನರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸಚಿವ ಸಂಪುಟ ಪುನರ್ ರಚನೆ ಮಾಡುವಂತೆ ಪಕ್ಷದ ನಾಯಕತ್ವದ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲ ಕೃಷ್ಣ ಶುಕ್ರವಾರ ಹೇಳಿದ್ದಾರೆ.

ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿದ 15 ದಿನಗಳ ಒಳಗೆ ಸಂಪುಟ್ ಪುನಾರಚನೆ ನಡೆಯಬೇಕೆಂದು ಒತ್ತಾಯಿಸಿದ ಅವರು, ಸಂಪುಟ ಪುನರ್ ರಚನೆ ನಡೆಯದಿದ್ದರೆ ಮತ್ತು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿದ್ದರೆ. ಅವರು ಬಲವಾದ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಎಚ್ಚರಿಸಿದರು.

'ಕೇರಳ ಮುಖ್ಯಮಂತ್ರಿ ಆಯ್ಕೆಯಾದ ನಂತರ ದೆಹಲಿಗೆ ಹೋಗಲು ಮೊದಲೇ ನಿರ್ಧರಿಸಲಾಗಿತ್ತು. ಈಗ ಮುಖ್ಯಮಂತ್ರಿ ಆಯ್ಕೆಯಾದ ನಂತರ, ನಾವು ಎರಡು-ಮೂರು ದಿನಗಳಲ್ಲಿ ಸಭೆ ಸೇರುತ್ತೇವೆ ಮತ್ತು ನಮ್ಮಲ್ಲಿ 30-35 ಶಾಸಕರು ದೆಹಲಿಗೆ ಹೋಗುತ್ತೇವೆ. ಈ ಬಾರಿ, ಸರ್ಕಾರ ಅಧಿಕಾರ ವಹಿಸಿಕೊಂಡು ಮೂರು ವರ್ಷ ಕಳೆದಿವೆ, ಆದರೆ ಇನ್ನೂ ಯಾರೂ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚಿಸುತ್ತಿಲ್ಲವಾದ್ದರಿಂದ ಮಾಡು ಇಲ್ಲವೇ ಮಡಿ ಪರಿಸ್ಥಿತಿ ನಮ್ಮಲ್ಲಿದೆ' ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಸಚಿವ ಸಂಪುಟ ಪುನರ್‌ರಚನೆ ಮಾಡಲಾಗುವುದು, 15 ಹೊಸಬರನ್ನು ಸೇರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾಗಿ ತಿಳಿಸಿದರುರು.

'ಈಗ ಸಚಿವರಾಗಿರುವವರು ಮೂರು ವರ್ಷ ಅಧಿಕಾರ ಅನುಭವಿಸಿರುವುದರಿಂದ ಹೊಸ 20 ಜನರಿಗೆ ಸಚಿವ ಸ್ಥಾನ ನೀಡುವಂತೆ ನಾವು ವಿನಂತಿಸಿದ್ದೇವೆ. ಆದ್ದರಿಂದ ನಾವು ಮೇ 28 ಅಥವಾ 29 ರೊಳಗೆ ದೆಹಲಿಗೆ ಹೋಗಲು ನಿರ್ಧರಿಸಿದ್ದೇವೆ. ಮೊದಲು, ನಮ್ಮಲ್ಲಿ 25 ಜನರು ಹೋಗಿದ್ದರು. ಈಗ ಸಂಖ್ಯೆ ಹೆಚ್ಚಾಗಿದೆ, ಆದ್ದರಿಂದ ನಮ್ಮಲ್ಲಿ ಸುಮಾರು 35 ಜನರು ಹೋಗಬಹುದು' ಎಂದು ಅವರು ಹೇಳಿದರು.

'ಈಗ ಇರುವವರೇ ಸಚಿವರಾಗಿ ಮುಂದುವರಿಯಬೇಕು ಎಂದು ಏನೂ ಇಲ್ಲ. ನಾವು ಅವರಿಗೆ ಮೂರು ವರ್ಷಗಳ ಕಾಲಾವಕಾಶ ನೀಡಿದ್ದೇವೆ. ಎರಡೂವರೆ ವರ್ಷಕ್ಕಿಂತ ಆರು ತಿಂಗಳು ಹೆಚ್ಚಿಗೆ ಅವರು ಸಚಿವರಾಗಿ ಮುಂದುವರಿದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿ ಉಳಿಯಬೇಕಾದರೆ, ಸಚಿವ ಸಂಪುಟವನ್ನು ಪುನರ್ ರಚಿಸುವ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ' ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ವಿಷಯ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಹೇಳಿದ ಕೃಷ್ಣ, 'ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ, ನೀವು ನಾಯಕತ್ವವನ್ನು ಕೇಳಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ನಮಗೆ ಸಂಪುಟ ಪುನರ್ ರಚನೆ ಮಾಡುವ ಮೂಲಕ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ನಾವು ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದು ಹೀಗೆಯೇ ಮುಂದುವರಿಯಲು ನಾವು ಬಿಡುವುದಿಲ್ಲ. 15 ದಿನಗಳಲ್ಲಿ ನಮಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ, ನಮ್ಮ ಮುಂದೆ ಬೇರೆ ಯೋಜನೆಗಳಿವೆ. ನಾವು ಅವುಗಳ ಬಗ್ಗೆ ನಿರ್ಧರಿಸುತ್ತೇವೆ' ಎಂದು ಅವರು ಹೇಳಿದರು.

ವರದಿಗಳ ಪ್ರಕಾರ, ಸಚಿವ ಸ್ಥಾನದ ಆಕಾಂಕ್ಷಿಗಳಾದ ಕೆಲವು ಕಾಂಗ್ರೆಸ್ ಶಾಸಕರು ಈಗಾಗಲೇ ದೆಹಲಿಯಲ್ಲಿದ್ದು, ಪಕ್ಷದ ನಾಯಕತ್ವವನ್ನು ಭೇಟಿ ಮಾಡಲು ಬಂದಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು, ಹಿರಿಯ ಶಾಸಕರ ತಂಡವು ದೆಹಲಿಯಲ್ಲಿ ಪಕ್ಷದ ನಾಯಕತ್ವವನ್ನು ಭೇಟಿ ಮಾಡಿ ಸಚಿವ ಸಂಪುಟ ಪುನರ್ ರಚನೆಗೆ ಒತ್ತಾಯಿಸಿತು. ಮೊದಲು ಮತ್ತು ಎರಡನೇ ಬಾರಿ ಶಾಸಕರಾಗಿರುವ ಕೆಲವರು ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಸಂಪುಟ ಪುನರ್ ರಚನೆಗೆ ಒಲವು ತೋರಿದರೆ, ಶಿವಕುಮಾರ್ ನಾಯಕತ್ವ ಬದಲಾವಣೆಯ ಬಗ್ಗೆ ಪಕ್ಷ ಮೊದಲು ನಿರ್ಧರಿಸಬೇಕೆಂದು ಬಯಸುತ್ತಾರೆ.

ಪಕ್ಷದ ಹಲವಾರು ಒಳಗಿನವರ ಪ್ರಕಾರ, ಕಾಂಗ್ರೆಸ್ ಹೈಕಮಾಂಡ್ ಸಂಪುಟ ಪುನರ್ ರಚನೆಯನ್ನು ಅನುಮೋದಿಸಿದರೆ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಪೂರ್ಣ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ಇದು ಶಿವಕುಮಾರ್ ಅವರು ಸಿಎಂ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸೇರಿದಂತೆ 34 ಸಚಿವರು ಇದ್ದಾರೆ. ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಇವೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ದುರುಪಯೋಗದ ಆರೋಪದ ಮೇಲೆ ಬಿ ನಾಗೇಂದ್ರ ರಾಜೀನಾಮೆ ನೀಡಿದರು ಮತ್ತು ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಕೆಎನ್ ರಾಜಣ್ಣ ಅವರನ್ನು ವಜಾಗೊಳಿಸಲಾಯಿತು. ಸಚಿವ ಡಿ ಸುಧಾಕರ್ ಅವರ ಇತ್ತೀಚಿನ ನಿಧನದಿಂದ ಮೂರನೇ ಹುದ್ದೆ ಖಾಲಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವಿಚಾರಣೆ ವಿಳಂಬದಿಂದ ಕಸಬ್, ಹಫೀಜ್ ಸಯೀದ್‌ಗೂ ಜಾಮೀನು ಸಿಗುತ್ತಿತ್ತೇ?': ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರಶ್ನೆ

ದೇಶ ಮೊದಲು: ಪ್ರಧಾನಿ ಮೋದಿಯನ್ನು ಬೆಂಬಲಿಸಿದ ಕಮಲ್ ಹಾಸನ್

Cockroach Janta Partyಗೆ ಪಾಕ್-ಬಾಂಗ್ಲಾದೇಶಿ ಫಾಲೋವರ್ಸ್‌ಗಳೇ ಹೆಚ್ಚು; ಇದು ದೊಡ್ಡ ಸಂಚು ಎಂದ ನೆಟ್ಟಿಗರು

CJP ಪಾಕಿಸ್ತಾನ ಜನತಾ ಪಾರ್ಟಿ, ಅಭಿಜೀತ್ ದಿಪ್ಕೆ ISI ಏಜೆಂಟ್! ಏನಿದು BJP ಆರೋಪ?

Mount Everest ಹತ್ತಿದ ಖುಷಿ ಕ್ಷಣ ಮಾತ್ರ ಉಳಿಯಲಿಲ್ಲ; ಅರ್ಧದಲ್ಲೇ ಪ್ರಾಣಬಿಟ್ಟ ಭಾರತೀಯ ಪರ್ವತಾರೋಹಿಗಳು!

SCROLL FOR NEXT